ಮೈಸೂರು ನಗರ

ಮೈಸೂರನ್ನು ಹಸಿರಾಗಿಸಲು ಮಹಾನಗರ ಪಾಲಿಕೆ ಸಜ್ಜು

ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು

ಮೈಸೂರು: ಪ್ರವಾಸಿಗರ ಸ್ವರ್ಗವಾಗಿರುವ ಪಾರಂಪರಿಕ ನಗರಿ ಮೈಸೂರಿನ ಸೊಬಗಿಗೆ ಮತ್ತಷ್ಟು ಮೆರಗು ನೀಡಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಇನ್ನು ಮುಂದೆ ಮೈಸೂರು ಹಸಿರು ಮೈಸೂರಾಗಿ ಕಂಗೊಳಿಸಲಿದೆ

ಹೌದು ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸುವುದಕ್ಕೆ ಹಾಗೂ ಮೈಸೂರನ್ನು ಹಸಿರು ನಗರವಾಗಿ ಮಾಡುವುದಕ್ಕೆ ಮೈಸೂರು ನಗರ ಹೊಸ ಯೋಜನೆ ಒಂದನ್ನು ಶುರು ಮಾಡಿದ್ದು, ಎರಡು ರಸ್ತೆಯ ಮಧ್ಯ ಭಾಗದಲ್ಲಿ ಅಲಂಕಾರಿಕ‌ ಹಾಗೂ ಹೂವಿನ ಗಿಡಗಳನ್ನು ನೆಡುವುದಕ್ಕೆ ಮುಂದಾಗಿದೆ.

15 ನೇ ಹಣಕಾಸು ಅಯೋಗದಲ್ಲಿ ಸುಮಾರು 4 ಕೋಟಿ ರೂ ವೆಚ್ಚದಲ್ಲಿ ನಗರದ ಎರಡು ರಸ್ತೆಯ ಮಧ್ಯೆ ಸುಮಾರು 47 ಕಿ.ಮೀ ವರೆಗೆ ಸಸಿಗಳನ್ನು ನೆಡುವುದಕ್ಕೆ ಪ್ರತ್ಯೇಕ ಗುತ್ತಿಗೆಯನ್ನು ನೀಡಲಾಗಿದೆ. ಗಿಡ ನೆಡುವುದಕ್ಕೆ ಗುತ್ತಿಗೆ ತೆಗೆದುಕೊಂಡವರೇ 2 ವರ್ಷಗಳ ಕಾಲ ಗಿಡಗಳನ್ನು ಪೋಷಣೆ ಮಾಡುವ ಹೊಣೆಯನ್ನು ಹೊತ್ತಿರುವುದು ವಿಶೇಷವೆನಿಸಿದೆ.

ಮೈಸೂರಿಗೆ ಪ್ರತಿ ದಿನವು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಅಗಮಿಸುತ್ತಾರೆ. ಈ ಕಾರಣದಿಂದ ಅಲಂಕಾರಿಕ ಸಸಿಗಳನ್ನು ನೆಟ್ಟರೆ ನಗರ ಸುಂದರವಾಗಿ ಕಾಣುತ್ತದೆ. ಜೊತೆಗೆ ಸುತ್ತಮುತ್ತ ಆಹ್ಲಾದಕರ ವಾತಾವರಣ ಸೃಷ್ಟಿಯಾಗುತ್ತದೆ ಎನ್ನುವ ಯೋಜನೆಯಿಂದ ಮಹಾನಗರ ಪಾಲಿಕೆ ವತಿಯಿಂದ ಎಮಿಲಿಯಾ, ಬೋಗನ್‌ ವಿಲ್ಲಾ, ಪ್ಲೊಮೇರಿಯಾ ಪುಡಿಕ್‌, ರಾಯಲ್‌ ಪಾಮ್‌ ನಂದಿ ಬಟ್ಟಲು, ಕಣಗಲೆ, ಬಿಳಿ ಹಾಗೂ ಹಳದಿ ಹೂವುಗಳ ಗಿಡಗಳನ್ನು ನೆಡಲಾಗುತ್ತಿದೆ.

ನಗರದ ಯಾವ ಯಾವ ಸ್ಥಳಗಳಲ್ಲಿ ಸಸಿ ನೆಡುವ ಕಾರ್ಯ:
ಮೈಸೂರು ನಗರದಲ್ಲಿ 47 ಕಿ.ಮೀವರೆಗೆ ಸಸಿಗಳನ್ನು ನೆಡುವ ಕಾರ್ಯ ಮಾಡಿರುವ ಮಹಾನಗರ ಪಾಲಿಕೆ, ಮೈಸೂರಿನ ಯರಗನಹಳ್ಳಿ ವೃತ್ತದಿಂದ ಮಹದೇವಪುರ ವೃತ್ತದವರೆಗೆ (3 ಕಿ.ಮೀ.), ಕುರುಬಾರಹಳ್ಳಿಯಿಂದ ಹಾಲಿನ ಡೇರಿವರೆಗೆ (0.75 ಕಿ.ಮೀ.), ಹಾಲಿನ ಡೇರಿ ವೃತ್ತದಿಂದ ದೇವೇಗೌಡ ವೃತ್ತದವರೆಗೆ (3.50 ಕಿ.ಮೀ.), ಎಸ್‌ಪಿ ಆಫೀಸ್‌ ವೃತ್ತದಿಂದ ಗಾಯತ್ರಿಪುರಂ ಮುಖ್ಯರಸ್ತೆವರೆಗೆ 0.40 ಕಿ.ಮೀ, ಫೋರಂ ಮಾಲ್‌ನಿಂದ ರಾಜೀವ್‌ ನಗರ (3 ಕಿ.ಮೀ.), ಫೌಂಟನ್‌ ವೃತ್ತದಿಂದ ಶಿವಾಜಿ ಮುಖ್ಯರಸ್ತೆವರೆಗೆ (0.85), ಮೆಟ್ರೋಪೋಲ್‌ ವೃತ್ತದಿಂದ ಹಿನಕಲ್‌ವರೆಗೆ (6 ಕಿ.ಮೀ.), ದಾಸಪ್ಪ ವೃತ್ತದಿಂದ ರಿಂಗ್‌ ರಸ್ತೆವರೆಗೆ (5 ಕಿ.ಮೀ.), ಕೋರ್ಟ್‌ ಮುಂಭಾಗದಿಂದ ಅಗ್ರಹಾರ ವೃತ್ತದವರೆಗೆ (5 ಕಿ.ಮೀ.), ಏಕಲವ್ಯ ವೃತ್ತದಿಂದ ಹಾರ್ಡಿಂಜ್‌ ವೃತ್ತದವರೆಗೆ (4 ಕಿ.ಮೀ.), ಸಿಲ್ಕ್ ಫ್ಯಾಕ್ಟರಿ ವೃತ್ತದಿಂದ ರಿಂಗ್‌‌ ರಸ್ತೆವರೆಗೆ (4 ಕಿ.ಮೀ.), ಕುಕ್ಕರಹಳ್ಳಿ ಸಿಗ್ನಲ್‌ನಿಂದ ದಟ್ಟಗಳ್ಳಿವರೆಗೆ (5 ಕಿ.ಮೀ.), ರೈಲ್ವೆ ಸ್ಟೇಷನ್‌ನಿಂದ ರಾಮಸ್ವಾಮಿ ವೃತ್ತದವರೆಗೆ (1.5 ಕಿ.ಮೀ.), ಪೆವಿಲಿಯನ್‌ ಆಟದ ಮೈದಾನದಿಂದ ನ್ಯಾಯಾಲಯದವರೆಗೆ (1 ಕಿ.ಮೀ.), ಸೌಗಂಕಾ ಉದ್ಯಾನದ ಮುಂಭಾಗದಿಂದ ಶಾಂತಿಸಾಗರ್‌ ಕಾಂಪ್ಲೆಕ್ಸ್‌ವರೆಗೆ (0.50 ಕಿ.ಮೀ.), ಫೌಂಟೇನ್‌ ವೃತ್ತದಿಂದ ಟಿಪ್ಪು ವೃತ್ತದವರೆಗೆ (0.50 ಕಿ.ಮೀ.), ಕೃಷ್ಣದೇವರಾಯ ವೃತ್ತದಿಂದ ರಿಂಗ್‌ ರಸ್ತೆವರೆಗೆ (1.50 ಕಿ.ಮೀ.), ಒಂಟಿಕೊಪ್ಪಲು ವೃತ್ತದಿಂದ ಸೆಂಟ್‌ ಜೋಸೆಫ್‌ ಶಾಲೆ ವೃತ್ತದವರೆಗೆ (2 ಕಿ.ಮೀ.), ನಂಜರಾಜ ಬಹದ್ದೂರ್‌ ಛತ್ರದ ಮುಂಭಾಗದ ರಸ್ತೆ ವಿಭಜಕ (0.50 ಕಿ.ಮೀ.), ಬೆಂಗಳೂರು ನೀಲಗಿರಿ ರಸ್ತೆ ವಿಭಜಕ (1 ಕಿ.ಮೀ.), ಸುಭಾಷ್‌ ನಗರ ದಂಡಿ ಮಾರಮ್ಮನ ರಸ್ತೆ ವಿಭಜಕ ಹಾಗೂ ಬೆಂಗಳೂರು – ಮೈಸೂರು ರಸ್ತೆ (2 ಕಿ.ಮೀ) ಮತ್ತು ನಾತ್‌ರ್‍ ಈಸ್ಟ್‌ ಆಫ್‌ ಎನ್‌.ಆರ್‌.ಮೊಹಲ್ಲಾ ದ್ರಾವಿಡ ಪಾರ್ಕ್ ನಿಂದ ರಾಜೀವ್‌ ನಗರ ಸೂರ್ಯನಾರಾಯಣ ದೇವಸ್ಥಾನದವರೆಗೆ (0.60 ಕಿ.ಮೀ) ಆಲಂಕಾರಿಕ ಸಸಿಗಳನ್ನು ನೆಡಲಾಗುತ್ತಿದೆ.

 

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

6 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

6 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

6 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

6 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

6 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

6 hours ago