ಮೈಸೂರು ನಗರ

ಮೈಸೂರಿನಲ್ಲಿ ಪಾಲಿಕೆ ವತಿಯಿಂದ ಮನೆಗಳಿಗೆ ಬಟ್ಟೆ ಚೀಲಗಳ ವಿತರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ಲಾಸ್ಟಿಕ್‌ ವಿರುದ್ಧ ಹೋರಾಟ ಮುಂದುವರಿದಿದ್ದು, ಪಾಲಿಕೆ ವತಿಯಿಂದ ಮನೆಗಳಿಗೆ ಬಟ್ಟೆ ಚೀಲಗಳನ್ನು ವಿತರಣೆ ಮಾಡಲಾಯಿತು.

ಕರ್ನಾಟಕದಲ್ಲಿ ಏಕ ಬಳಕೆಯ ಪಾಲಿಥಿನ್‌ ಚೀಲಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಜನರು ತಮ್ಮ ಮನೆಯಿಂದ ಅಂಗಡಿಗಳಿಗೆ ಬಟ್ಟೆ ಚೀಲಗಳನ್ನು ತೆಗೆದುಕೊಡು ಹೋಗುವಂತೆ ಸರ್ಕಾರ ಸಲಹೆ ನೀಡಿದೆ.

ಆದರೂ ಕರ್ನಾಟಕದ ಅನೇಕ ಸ್ಥಳಗಳಲ್ಲಿ ಅಂದರೆ ರೆಸ್ಟೋರೆಂಟ್‌ಗಳು, ಚಹಾ ಅಂಗಡಿಗಳು, ತರಕಾರಿ ಅಂಗಡಿಗಳಲ್ಲಿ ಪಾಲಿಥಿನ್‌ ಚೀಲಗಳನ್ನು ಬಳಸುತ್ತಾರೆ. ಇದನ್ನು ತಡೆಯಲು ಅಧಿಕಾರಿಗಳು ಅನೇಕ ಕ್ರಮ ಕೈಗೊಳ್ಳುತ್ತಿದ್ದು, ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಕೂಡ ಮಹಾನಗರ ಪಾಲಿಕೆ ವತಿಯಿಂದ ಪ್ಲಾಸ್ಟಿಕ್‌ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತಿದ್ದು, ಪಾಲಿಕೆ ಆಯುಕ್ತ ಆಶಾದ್‌ ಉರ್‌ ರೆಹಮಾನ್‌ ಶರೀಫ್‌ ಅವರು ಪ್ರತೀ ಮನೆ ಮನೆಗೂ ತೆರಳಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಅಗ್ರಹಾರದ ಆಸುಪಾಸಿನಲ್ಲಿ ಮನೆ ಮನೆಗೆ ತೆರಳಿದ ಮಹಾನಗರ ಪಾಲಿಕೆ ಸಿಬ್ಬಂದಿಗಳು, ಮನೆಗಳಿಗೆ ಬಟ್ಟೆ ಚೀಲಗಳನ್ನು ವಿತರಿಸಿ ಪ್ಲಾಸ್ಟಿಕ್‌ ಬಗ್ಗೆ ಅರಿವು ಮೂಡಿಸಿದರು.

ಪ್ಲಾಸ್ಟಿಕ್‌ ಬಳಕೆಯಿಂದ ಅನೈರ್ಮಲ್ಯ ಉಂಟಾಗುತ್ತದೆ. ಪರಿಸರದ ಮೇಲೂ ಭಾರೀ ಪರಿಣಾಮ ಬೀರಲಿದೆ. ಇದರಿಂದ ರೋಗ ರುಜಿನಗಳು ಹರಡುತ್ತಿದ್ದು, ಇದನ್ನು ತಡೆಗಟ್ಟಲು ಸಾರ್ವಜನಿಕರು ಮುಂದಾಗಬೇಕು ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

45 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

49 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

56 mins ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago