ಮೈಸೂರು ನಗರ

ಮೈಸೂರಿನಲ್ಲಿ ಪಾಲಿಕೆ ವತಿಯಿಂದ ಮನೆಗಳಿಗೆ ಬಟ್ಟೆ ಚೀಲಗಳ ವಿತರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ಲಾಸ್ಟಿಕ್‌ ವಿರುದ್ಧ ಹೋರಾಟ ಮುಂದುವರಿದಿದ್ದು, ಪಾಲಿಕೆ ವತಿಯಿಂದ ಮನೆಗಳಿಗೆ ಬಟ್ಟೆ ಚೀಲಗಳನ್ನು ವಿತರಣೆ ಮಾಡಲಾಯಿತು.

ಕರ್ನಾಟಕದಲ್ಲಿ ಏಕ ಬಳಕೆಯ ಪಾಲಿಥಿನ್‌ ಚೀಲಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಜನರು ತಮ್ಮ ಮನೆಯಿಂದ ಅಂಗಡಿಗಳಿಗೆ ಬಟ್ಟೆ ಚೀಲಗಳನ್ನು ತೆಗೆದುಕೊಡು ಹೋಗುವಂತೆ ಸರ್ಕಾರ ಸಲಹೆ ನೀಡಿದೆ.

ಆದರೂ ಕರ್ನಾಟಕದ ಅನೇಕ ಸ್ಥಳಗಳಲ್ಲಿ ಅಂದರೆ ರೆಸ್ಟೋರೆಂಟ್‌ಗಳು, ಚಹಾ ಅಂಗಡಿಗಳು, ತರಕಾರಿ ಅಂಗಡಿಗಳಲ್ಲಿ ಪಾಲಿಥಿನ್‌ ಚೀಲಗಳನ್ನು ಬಳಸುತ್ತಾರೆ. ಇದನ್ನು ತಡೆಯಲು ಅಧಿಕಾರಿಗಳು ಅನೇಕ ಕ್ರಮ ಕೈಗೊಳ್ಳುತ್ತಿದ್ದು, ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಕೂಡ ಮಹಾನಗರ ಪಾಲಿಕೆ ವತಿಯಿಂದ ಪ್ಲಾಸ್ಟಿಕ್‌ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತಿದ್ದು, ಪಾಲಿಕೆ ಆಯುಕ್ತ ಆಶಾದ್‌ ಉರ್‌ ರೆಹಮಾನ್‌ ಶರೀಫ್‌ ಅವರು ಪ್ರತೀ ಮನೆ ಮನೆಗೂ ತೆರಳಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಅಗ್ರಹಾರದ ಆಸುಪಾಸಿನಲ್ಲಿ ಮನೆ ಮನೆಗೆ ತೆರಳಿದ ಮಹಾನಗರ ಪಾಲಿಕೆ ಸಿಬ್ಬಂದಿಗಳು, ಮನೆಗಳಿಗೆ ಬಟ್ಟೆ ಚೀಲಗಳನ್ನು ವಿತರಿಸಿ ಪ್ಲಾಸ್ಟಿಕ್‌ ಬಗ್ಗೆ ಅರಿವು ಮೂಡಿಸಿದರು.

ಪ್ಲಾಸ್ಟಿಕ್‌ ಬಳಕೆಯಿಂದ ಅನೈರ್ಮಲ್ಯ ಉಂಟಾಗುತ್ತದೆ. ಪರಿಸರದ ಮೇಲೂ ಭಾರೀ ಪರಿಣಾಮ ಬೀರಲಿದೆ. ಇದರಿಂದ ರೋಗ ರುಜಿನಗಳು ಹರಡುತ್ತಿದ್ದು, ಇದನ್ನು ತಡೆಗಟ್ಟಲು ಸಾರ್ವಜನಿಕರು ಮುಂದಾಗಬೇಕು ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

7 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

7 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

7 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

7 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

7 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

7 hours ago