ಮೈಸೂರು: ಮೈಸೂರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಮತ್ತು ಇಲಾಖೆಗಳಲ್ಲಿ ಸರ್ಕಾರದ ಸುತ್ತೋಲೆ ಹಾಗೂ ಆದೇಶದಂತೆ ಕರ್ತವ್ಯ ನಿರ್ವಹಿಸದ ಬಗ್ಗೆ ಹಾಗೂ ಲಂಚದ ಬೇಡಿಕೆ ಬಗ್ಗೆ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಕ್ರಮ ಕೈಗೊಳ್ಳಲು ಮುಂದಾಗಿದೆ.
ಈ ಬಗ್ಗೆ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಸದಸ್ಯರುಗಳು, ಮೈಸೂರು ಜಿಲ್ಲೆಗೆ ಬರುವ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಇಲಾಖೆಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದೇ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ.
ಪಾರದರ್ಶಕ ಆಡಳಿತಕ್ಕಾಗಿ ಭ್ರಷ್ಟಾಚಾರ ತೊಡೆದು ಹಾಕಲು ಕಾನೂನಿನ ನಿಯಮದಂತೆ ಅಧಿಕಾರಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು. ಈ ಉದ್ದೇಶಕ್ಕಾಗಿಯೇ ಮೈಸೂರು ಜಿಲ್ಲಾ ಘಟಕ ಸ್ಥಾಪಿಸಲಾಗಿದೆ.
ಮುಖ್ಯವಾಗಿ ಪ್ರತಿಯೊಂದು ಇಲಾಖೆಯ ವೈಫಲ್ಯಗಳನ್ನು ಸರಿಪಡಿಸಲು ಭ್ರಷ್ಟಾಚಾರದ ಬ್ರಹ್ಮಾಂಡ ಹಸ್ತ್ರವನ್ನಾಗಿ ಈ ವೇದಿಕೆಯನ್ನು ಉದ್ಘಾಟಿಸಲಾಗಿದೆ ಎಂದು ತಿಳಿಸಿದರು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…