ಮೈಸೂರು ನಗರ

ಮೈಸೂರು ನಗರ ಪೊಲೀಸರಿಂದ ಬೃಹತ್‌ ಕಾರ್ಯಾಚರಣೆ: 63 ಲಕ್ಷ ಮೌಲ್ಯದ ಕಳವು ಸ್ವತ್ತು ವಶ

ಮೈಸೂರು: ಕಳೆದ ಎರಡು ತಿಂಗಳಿನಲ್ಲಿ ಮೈಸೂರು ನಗರ ಪೊಲೀಸರು ನಡೆಸಿದ ಬೃಹತ್‌ ಕಾರ್ಯಾಚರಣೆಯಲ್ಲಿ ಒಟ್ಟು 42 ಸ್ವತ್ತು ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈಸೂರು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಅವರು, ಒಟ್ಟು 42 ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ 63 ಲಕ್ಷ ಮೌಲ್ಯದ ಕಳವು ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 19 ಆರೋಪಿಗಳನ್ನು ಬಂಧಿಸಲಾಗಿದೆ.

ಪೊಲೀಸರು ವಶಪಡಿಸಿಕೊಂಡಿರುವ ಒಟ್ಟು 63 ಲಕ್ಷ ಮೌಲ್ಯದ ಸ್ವತ್ತುಗಳಲ್ಲಿ 659 ಗ್ರಾಂ ಚಿನ್ನಾಭರಣ, 1 ಕೆಜಿ ಬೆಳ್ಳಿ, 27 ದ್ವಿಚಕ್ರ ವಾಹನಗಳು, 1 ಕಾರು, 2,57,000 ನಗದು, ಮತ್ತು 1 ಲ್ಯಾಪ್‌ ಟಾಪ್‌ ಸೇರಿವೆ ಎಂದು ಮಾಹಿತಿ ನೀಡಿದರು.

8 ಸರಗಳ್ಳತನ ಪ್ರಕರಣಗಳು, 2 ಮನೆಗಳ್ಳತನ ಪ್ರಕರಣಗಳು, 1 ಮನೆ ಕೆಲಸದವರಿಂದ ಕಳ್ಳತನ ಪ್ರಕರಣ, 28 ವಾಹನ ಕಳ್ಳತನ ಪ್ರಕರಣಗಳು, 3 ಸಾಮಾನ್ಯ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ.

ಇನ್ನು ಪೊಲೀಸರು ಮಾದಕ ವಸ್ತುಗಳ ವಿರುದ್ಧವೂ ಕಾರ್ಯಾಚರಣೆ ನಡೆಸಿದ್ದು, 11 ಎನ್‌ಡಿಪಿಎಸ್‌ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ 65 ಕೆಜಿ 800 ಗ್ರಾಂ ಗಾಂಜಾ ಹಾಗೂ 23 ಗ್ರಾಂ ಎಂಡಿಎಂಎ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

21 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

21 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

21 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

21 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

21 hours ago