ಮೈಸೂರು ನಗರ

ಮೈಸೂರು ನಗರ ಪೊಲೀಸರಿಂದ ಬೃಹತ್‌ ಕಾರ್ಯಾಚರಣೆ: 63 ಲಕ್ಷ ಮೌಲ್ಯದ ಕಳವು ಸ್ವತ್ತು ವಶ

ಮೈಸೂರು: ಕಳೆದ ಎರಡು ತಿಂಗಳಿನಲ್ಲಿ ಮೈಸೂರು ನಗರ ಪೊಲೀಸರು ನಡೆಸಿದ ಬೃಹತ್‌ ಕಾರ್ಯಾಚರಣೆಯಲ್ಲಿ ಒಟ್ಟು 42 ಸ್ವತ್ತು ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈಸೂರು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಅವರು, ಒಟ್ಟು 42 ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ 63 ಲಕ್ಷ ಮೌಲ್ಯದ ಕಳವು ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 19 ಆರೋಪಿಗಳನ್ನು ಬಂಧಿಸಲಾಗಿದೆ.

ಪೊಲೀಸರು ವಶಪಡಿಸಿಕೊಂಡಿರುವ ಒಟ್ಟು 63 ಲಕ್ಷ ಮೌಲ್ಯದ ಸ್ವತ್ತುಗಳಲ್ಲಿ 659 ಗ್ರಾಂ ಚಿನ್ನಾಭರಣ, 1 ಕೆಜಿ ಬೆಳ್ಳಿ, 27 ದ್ವಿಚಕ್ರ ವಾಹನಗಳು, 1 ಕಾರು, 2,57,000 ನಗದು, ಮತ್ತು 1 ಲ್ಯಾಪ್‌ ಟಾಪ್‌ ಸೇರಿವೆ ಎಂದು ಮಾಹಿತಿ ನೀಡಿದರು.

8 ಸರಗಳ್ಳತನ ಪ್ರಕರಣಗಳು, 2 ಮನೆಗಳ್ಳತನ ಪ್ರಕರಣಗಳು, 1 ಮನೆ ಕೆಲಸದವರಿಂದ ಕಳ್ಳತನ ಪ್ರಕರಣ, 28 ವಾಹನ ಕಳ್ಳತನ ಪ್ರಕರಣಗಳು, 3 ಸಾಮಾನ್ಯ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ.

ಇನ್ನು ಪೊಲೀಸರು ಮಾದಕ ವಸ್ತುಗಳ ವಿರುದ್ಧವೂ ಕಾರ್ಯಾಚರಣೆ ನಡೆಸಿದ್ದು, 11 ಎನ್‌ಡಿಪಿಎಸ್‌ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ 65 ಕೆಜಿ 800 ಗ್ರಾಂ ಗಾಂಜಾ ಹಾಗೂ 23 ಗ್ರಾಂ ಎಂಡಿಎಂಎ ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

14 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

15 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

16 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

16 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

17 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

18 hours ago