ಮೈಸೂರು ನಗರ

ಮೈಸೂರು | ಸ್ವಚ್ಛ ಸರ್ವೇಕ್ಷಣೆ ; ಜಾಥಾ ನಡೆಸಿ ಜನರಿಗೆ ಜಾಗೃತಿ

ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ ಇನ್ನಿತರೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಬುಧವಾರ ಬೆಳಿಗ್ಗೆ ನಗರದ ಪುರಭವನದ ಆವರಣದಲ್ಲಿ ಶೌಚಾಲಯ ಬಳಕೆ ಕುರಿತು ಏರ್ಪಡಿಸಲಾಗಿದ್ದ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಜಾಗೃತಿ ಜಾಥಾಗೆ ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಚಾಲನೆ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜಿಸಬೇಡಿ, ಮನೆಗಳಲ್ಲಿ ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂಬಿತ್ಯಾದಿ ಫಲಕಗಳನ್ನು ಹಿಡಿದ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.

ಇದೇ ವೇಳೆ ಶೌಚಾಲಯಗಳನ್ನು ಹೇಗೆ ಸ್ವಚ್ಛವಾಗಿಟ್ಟುಕೊಳ್ಳಬೇಕು? ಸಾರ್ವಜನಿಕ ಶೌಚಾಲಯಗಳನ್ನು ಹೇಗೆ ಬಳಸಬೇಕು? ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜಿಸಿದಲ್ಲಿ ಆಗುವ ತೊಂದರೆಗಳೇನು? ಎಂಬುದನ್ನು ಕುರಿತು ಗಾಂಧಿ ವೃತ್ತದಲ್ಲಿ ಬೀದಿ ನಾಟಕ ಪ್ರದರ್ಶಿಸಲಾಯಿತು.

ಇದಕ್ಕೂ ಮುನ್ನ ಪುರಭವನದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಸಾರ್ವಜನಿಕ ಶೌಚಾಲಯಗಳಲ್ಲಿ ನೈರ್ಮಲ್ಯತೆ ಕಾಪಾಡಬೇಕು. ಇಲ್ಲದಿದ್ದರೆ ಸಾಂಕ್ರಾಮಿಕ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಸಾರ್ವಜನಿಕರು ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

2016ರಲ್ಲಿ ದೇಶದ ಸ್ವಚ್ಛ ನಗರಗಳ ಪೈಕಿ ಮೈಸೂರು ಪ್ರಥಮ ಸ್ಥಾನ ಗಳಿಸಿತ್ತು. ಕಳೆದ ಬಾರಿ 3 ನೇ ಸ್ಥಾನ ಬಂದಿದೆ. ಜನರು ಸ್ವಚ್ಛತೆಯ ಬಗ್ಗೆ ನಗರಪಾಲಿಕೆಯೊಂದಿಗೆ ಕೈಜೋಡಿಸಿದರೆ ಈ ಬಾರಿ ಮೈಸೂರು ಸ್ವಚ್ಛತೆಯಲ್ಲಿ ಮತ್ತೆ ನಂ.1 ಸ್ಥಾನ ಪಡೆಯಬಹುದು ಎಂದರು.

ನಂತರ ನಗರಪಾಲಿಕೆಯಲ್ಲಿ ಸ್ವಚ್ಛತಾ ವಿಭಾಗದಲ್ಲಿ ಕೆಲಸ ಮಾಡುವವರಿಗೆ ಹಾಗೂ ಶೌಚಾಲಯ ನಿರ್ವಹಣೆ ಮಾಡುವ ಸಿಬ್ಬಂದಿಗೆ ಆಯುಕ್ತರು ಸ್ವಚ್ಛತಾ ಕಿಟ್ ಹಾಗೂ ಸೇಫ್ಟಿ ಕಿಟ್‌ಗಳನ್ನು ವಿತರಣೆ ಮಾಡಿದರು. ಪಾಲಿಕೆ ಅಧಿಕ್ಷಕ ಅಭಿಯಂತರ ಮಂಜು, ಎಇಇ ಶಿಲ್ಪಾ, ಅಶ್ವಿನ್, ಧನುಷ್, ಅಧಿಕಾರಿಗಳಾದ ನಾಗರಾಜೇಗೌಡ, ಮುಸ್ತಾಫಾ, ರವಿಕುಮಾರ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago