ಮೈಸೂರು ನಗರ

ಮೈಸೂರು| ಸಿಎಂ ಸಿದ್ದರಾಮಯ್ಯ ಮನೆಗೂ ಸಿಗದ ವಿದ್ಯುತ್‌ ಸಂಪರ್ಕ: ಕಾರಣ ಇಷ್ಟೇ

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ನಿರ್ಮಿಸುತ್ತಿರುವ ಹೊಸ ಮನೆಗೆ ವಿದ್ಯುತ್‌ ಸಂಪರ್ಕ ಪಡೆಯಲು ಸಿಎಂ ಸಿದ್ದರಾಮಯ್ಯರಿಗೆ ಇನ್ನೂ ಸಾಧ್ಯವಾಗಿಲ್ಲ.

ಕುವೆಂಪುನಗರದಲ್ಲಿ 80×120 ಅಡಿ ಅಳತೆಯ ನಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಇದಕ್ಕೆ ಆರು ತಿಂಗಳ ಹಿಂದೆಯೇ 94 ಕಿಲೋ ವ್ಯಾಟ್‌ ವಿದ್ಯುತ್‌ ಮಂಜೂರಾಗಿದೆ.

ಆದರೆ ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪ್ರಮಾಣಪತ್ರ ಕಡ್ಡಾಯ ಮಾಡಿರುವ ಕಾರಣ ವಿದ್ಯುತ್‌ ಸಂಪರ್ಕ ನೀಡಲು ಸಾಧ್ಯವಾಗಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನು ಓದಿ: ವಿಶ್ವಸಂಸ್ಥೆ ಹವಾಮಾನ ಶೃಂಗಸಭೆಯಲ್ಲಿ ಬೆಂಕಿ: 21 ಜನರಿಗೆ ಗಂಭೀರ ಗಾಯ

ಇನ್ನು ನಿವೇಶನ ಅಥವಾ ಕಟ್ಟಡದ ವಿಸ್ತೀರ್ಣವನ್ನು ಪರಿಗಣಿಸದೇ ಈಗಾಗಲೇ ನಿರ್ಮಾಣವಾಗಿರುವ ಎಲ್ಲಾ ಕಟ್ಟಡಗಳಿಗೆ ಒಂದು ಬಾರಿಗೆ ಮಾತ್ರ ಅನ್ವಯವಾಗುವಂತೆ ಷರತ್ತು ವಿಧಿಸಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಇಂಧನ ಇಲಾಖೆ ಒಲವು ತೋರಿದೆ.

ಸುಪ್ರೀಂಕೋರ್ಟ್‌ ತೀರ್ಪಿನ ಪ್ರಕಾರ ನಕ್ಷೆ ಅನುಮೋದನೆ ಹಾಗೂ ಓಸಿ ಕಡ್ಡಾಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮನೆಗೂ ಬಿಸಿ ತಟ್ಟಿದೆ. ಮುಖ್ಯಮಂತ್ರಿಗಳ ಕಥೆಯೇ ಹೀಗಾದ್ರೆ, ಹೊಸದಾಗಿ ಮನೆ ಕಟ್ಟುತ್ತಿರುವ ಜನಸಾಮಾನ್ಯರ ಪಾಡೇನು ಎಂಬ ಪ್ರಶ್ನೆ ಮೂಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago