ಮೈಸೂರು ನಗರ

ಮೈಸೂರು| ಸಿಎಂ ಸಿದ್ದರಾಮಯ್ಯ ಮನೆಗೂ ಸಿಗದ ವಿದ್ಯುತ್‌ ಸಂಪರ್ಕ: ಕಾರಣ ಇಷ್ಟೇ

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ನಿರ್ಮಿಸುತ್ತಿರುವ ಹೊಸ ಮನೆಗೆ ವಿದ್ಯುತ್‌ ಸಂಪರ್ಕ ಪಡೆಯಲು ಸಿಎಂ ಸಿದ್ದರಾಮಯ್ಯರಿಗೆ ಇನ್ನೂ ಸಾಧ್ಯವಾಗಿಲ್ಲ.

ಕುವೆಂಪುನಗರದಲ್ಲಿ 80×120 ಅಡಿ ಅಳತೆಯ ನಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಇದಕ್ಕೆ ಆರು ತಿಂಗಳ ಹಿಂದೆಯೇ 94 ಕಿಲೋ ವ್ಯಾಟ್‌ ವಿದ್ಯುತ್‌ ಮಂಜೂರಾಗಿದೆ.

ಆದರೆ ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪ್ರಮಾಣಪತ್ರ ಕಡ್ಡಾಯ ಮಾಡಿರುವ ಕಾರಣ ವಿದ್ಯುತ್‌ ಸಂಪರ್ಕ ನೀಡಲು ಸಾಧ್ಯವಾಗಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದನ್ನು ಓದಿ: ವಿಶ್ವಸಂಸ್ಥೆ ಹವಾಮಾನ ಶೃಂಗಸಭೆಯಲ್ಲಿ ಬೆಂಕಿ: 21 ಜನರಿಗೆ ಗಂಭೀರ ಗಾಯ

ಇನ್ನು ನಿವೇಶನ ಅಥವಾ ಕಟ್ಟಡದ ವಿಸ್ತೀರ್ಣವನ್ನು ಪರಿಗಣಿಸದೇ ಈಗಾಗಲೇ ನಿರ್ಮಾಣವಾಗಿರುವ ಎಲ್ಲಾ ಕಟ್ಟಡಗಳಿಗೆ ಒಂದು ಬಾರಿಗೆ ಮಾತ್ರ ಅನ್ವಯವಾಗುವಂತೆ ಷರತ್ತು ವಿಧಿಸಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಇಂಧನ ಇಲಾಖೆ ಒಲವು ತೋರಿದೆ.

ಸುಪ್ರೀಂಕೋರ್ಟ್‌ ತೀರ್ಪಿನ ಪ್ರಕಾರ ನಕ್ಷೆ ಅನುಮೋದನೆ ಹಾಗೂ ಓಸಿ ಕಡ್ಡಾಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮನೆಗೂ ಬಿಸಿ ತಟ್ಟಿದೆ. ಮುಖ್ಯಮಂತ್ರಿಗಳ ಕಥೆಯೇ ಹೀಗಾದ್ರೆ, ಹೊಸದಾಗಿ ಮನೆ ಕಟ್ಟುತ್ತಿರುವ ಜನಸಾಮಾನ್ಯರ ಪಾಡೇನು ಎಂಬ ಪ್ರಶ್ನೆ ಮೂಡಿದೆ.

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

2 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

2 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

2 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

2 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

2 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

2 hours ago