ಮೈಸೂರು ನಗರ

ಮೈಸೂರು ಪಾಲಿಕೆಯಲ್ಲಿ ಹಣ ವಂಚನೆ ಆರೋಪ : ಮೂವರು ಅಧಿಕಾರಿಗಳ ಅಮಾನತ್ತು

ಮೈಸೂರು : ಕರ್ತವ್ಯಕ್ಕೆ ಗೈರಾದ ಪೌರಕಾರ್ಮಿಕರಿಗೆ ಸಂಬಳ ವಿತರಿಸಿ ಮಹಾನಗರ ಪಾಲಿಕೆ ಹಣವನ್ನು ವಂಚನೆ ಮಾಡಿದ ಆರೋಪದ ಮೇರೆಗೆ ಮೂವರು ಅಧಿಕಾರಿಗಳನ್ನು ನಗರಪಾಲಿಕೆ ಆಯುಕ್ತರು ಸೇವೆಯಿಂದ ಅಮಾನತ್ತು ಮಾಡಿದ್ದಾರೆ.

ಗೈರು ಹಾಜರಾಗಿರುವ ದಿನಗಳಿಗೆ ಪೌರಕಾರ್ಮಿಕರ ಹೆಚ್ಚುವರಿ ವೇತನ ಪಾವತಿಸಿ ಕರ್ತವ್ಯಲೋಪ ಎಸಗಿದ ನಗರಪಾಲಿಕೆಯ ಆರೋಗ್ಯಶಾಖೆ ಪ್ರಥಮ ದರ್ಜೆ ಸಹಾಯಕರಾದ ಕೆ.ಎಲ್.ಸಿ.ಪಾಪ, ಪುಷ್ಪಾವತಿ, ದ್ವಿತೀಯ ದರ್ಜೆ ಸಹಾಯಕರಾದ ಸಿ.ಎಚ್.ಅನಿತ ಅವರನ್ನು ಆಯುಕ್ತರು ಅಮಾನತ್ತು ಮಾಡಿದ್ದಾರೆ.

2025ರ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿಗೆ ಸಂಬಂಧಿಸಿದಂತೆ ಆರೋಗ್ಯ ನಿರೀಕ್ಷಕರು ನೀಡಿರುವ ಹಾಜರಾತಿ ಪಟ್ಟಿಯೊಂದಿಗೆ ಪರಿಶೀಲಿಸಿ ಎಂ.ಪುಷ್ಪಾವತಿ ಅವರು ಒಟ್ಟು 1,17,081ರೂ., ಸಿ.ಎಚ್.ಅನಿತಾ ಇವರು ಒಟ್ಟು 1,54,705 ರೂ.ಗಳು, ಕೆ.ಎಲ್.ಸಿ.ಪಾಪ ಅವರು 13,58,525 ರೂ.ಗಳನ್ನು ಗೈರು ಹಾಜರಿ ದಿನಗಳಿಗೂ ವೇತನ ಪಾವತಿಸಿರುವುದು ಕಂಡುಬಂದಿರುತ್ತದೆ. ಇದು ಕರ್ತವ್ಯಲೋಪ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಆಯುಕ್ತರು ಇಲಾಖೆ ವಿಚಾರಣೆ ಕಾಯ್ದಿರಿಸಿ ಜ.21ರಂದು ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.

ಇಲಾಖೆಯಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದು, ವರ್ಗಾವಣೆ ಮಾಡುವಂತೆ ಒತ್ತಾಯಿಸಲಾಗಿತ್ತು. ಕಾಯಂ ಪೌರಕಾರ್ಮಿಕರು ನಿಧನರಾದರೆ ಅನುಕಂಪದ ಆಧಾರದ ಕೆಲಸ ನೀಡಲು ಲಕ್ಷಾಂತರ ರೂ. ಲಂಚ ಕೇಳುತ್ತಿದ್ದರು. ಎಲ್‌ಐಸಿ ಪಾಲಿಸಿಗಳನ್ನು ಇವರೇ ಮಾಡುತ್ತಿದ್ದರು. ಈ ಬಗ್ಗೆ ಆರೋಗ್ಯ ಶಾಖೆಯ ಅಕ್ರಮಗಳ ಬಗ್ಗೆ ನಗರಪಾಲಿಕೆ ಆಯುಕ್ತರ ಗಮನಕ್ಕೆ ತರಲಾಗಿತ್ತು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಜಿಲ್ಲಾಧ್ಯಕ್ಷ ಆರ್ಟಿಸ್ಟ್ ಎಸ್.ನಾಗರಾಜ್ ತಿಳಿಸಿದ್ದಾರೆ.

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

3 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

3 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

3 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

3 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

3 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

4 hours ago