ಮೈಸೂರು : ಕರ್ತವ್ಯಕ್ಕೆ ಗೈರಾದ ಪೌರಕಾರ್ಮಿಕರಿಗೆ ಸಂಬಳ ವಿತರಿಸಿ ಮಹಾನಗರ ಪಾಲಿಕೆ ಹಣವನ್ನು ವಂಚನೆ ಮಾಡಿದ ಆರೋಪದ ಮೇರೆಗೆ ಮೂವರು ಅಧಿಕಾರಿಗಳನ್ನು ನಗರಪಾಲಿಕೆ ಆಯುಕ್ತರು ಸೇವೆಯಿಂದ ಅಮಾನತ್ತು ಮಾಡಿದ್ದಾರೆ.
ಗೈರು ಹಾಜರಾಗಿರುವ ದಿನಗಳಿಗೆ ಪೌರಕಾರ್ಮಿಕರ ಹೆಚ್ಚುವರಿ ವೇತನ ಪಾವತಿಸಿ ಕರ್ತವ್ಯಲೋಪ ಎಸಗಿದ ನಗರಪಾಲಿಕೆಯ ಆರೋಗ್ಯಶಾಖೆ ಪ್ರಥಮ ದರ್ಜೆ ಸಹಾಯಕರಾದ ಕೆ.ಎಲ್.ಸಿ.ಪಾಪ, ಪುಷ್ಪಾವತಿ, ದ್ವಿತೀಯ ದರ್ಜೆ ಸಹಾಯಕರಾದ ಸಿ.ಎಚ್.ಅನಿತ ಅವರನ್ನು ಆಯುಕ್ತರು ಅಮಾನತ್ತು ಮಾಡಿದ್ದಾರೆ.
2025ರ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿಗೆ ಸಂಬಂಧಿಸಿದಂತೆ ಆರೋಗ್ಯ ನಿರೀಕ್ಷಕರು ನೀಡಿರುವ ಹಾಜರಾತಿ ಪಟ್ಟಿಯೊಂದಿಗೆ ಪರಿಶೀಲಿಸಿ ಎಂ.ಪುಷ್ಪಾವತಿ ಅವರು ಒಟ್ಟು 1,17,081ರೂ., ಸಿ.ಎಚ್.ಅನಿತಾ ಇವರು ಒಟ್ಟು 1,54,705 ರೂ.ಗಳು, ಕೆ.ಎಲ್.ಸಿ.ಪಾಪ ಅವರು 13,58,525 ರೂ.ಗಳನ್ನು ಗೈರು ಹಾಜರಿ ದಿನಗಳಿಗೂ ವೇತನ ಪಾವತಿಸಿರುವುದು ಕಂಡುಬಂದಿರುತ್ತದೆ. ಇದು ಕರ್ತವ್ಯಲೋಪ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಆಯುಕ್ತರು ಇಲಾಖೆ ವಿಚಾರಣೆ ಕಾಯ್ದಿರಿಸಿ ಜ.21ರಂದು ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.
ಇಲಾಖೆಯಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದು, ವರ್ಗಾವಣೆ ಮಾಡುವಂತೆ ಒತ್ತಾಯಿಸಲಾಗಿತ್ತು. ಕಾಯಂ ಪೌರಕಾರ್ಮಿಕರು ನಿಧನರಾದರೆ ಅನುಕಂಪದ ಆಧಾರದ ಕೆಲಸ ನೀಡಲು ಲಕ್ಷಾಂತರ ರೂ. ಲಂಚ ಕೇಳುತ್ತಿದ್ದರು. ಎಲ್ಐಸಿ ಪಾಲಿಸಿಗಳನ್ನು ಇವರೇ ಮಾಡುತ್ತಿದ್ದರು. ಈ ಬಗ್ಗೆ ಆರೋಗ್ಯ ಶಾಖೆಯ ಅಕ್ರಮಗಳ ಬಗ್ಗೆ ನಗರಪಾಲಿಕೆ ಆಯುಕ್ತರ ಗಮನಕ್ಕೆ ತರಲಾಗಿತ್ತು ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಜಿಲ್ಲಾಧ್ಯಕ್ಷ ಆರ್ಟಿಸ್ಟ್ ಎಸ್.ನಾಗರಾಜ್ ತಿಳಿಸಿದ್ದಾರೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…