ಮೈಸೂರು ನಗರ

ಮೈಸೂರು| ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುವ ಹಸು-ಕುದುರೆಗಳು: ಭಯದಲ್ಲಿ ವಾಹನ ಸವಾರರು

ಮೈಸೂರು: ಇಲ್ಲಿನ ಗಂಗೋತ್ರಿ ಲೇಔಟ್ ಬಳಿಯ ಮಾರುತಿ ಟೆಂಪಲ್ ರಸ್ತೆಯಲ್ಲಿ ಬೀದಿ ಹಸು ಹಾಗೂ ಕುದುರೆಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರು ಭಯದಲ್ಲಿ ಸಂಚಾರ ಮಾಡುವ ಪರಿಸ್ಥಿತಿ ಎದುರಾಗಿದೆ.

ರಸ್ತೆಯಲ್ಲಿ ಈಗಾಗಲೇ ಹಲವಾರು ಬಾರಿ ಅಪಘಾತಗಳು ಸಂಭವಿಸಿದ್ದು, ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಿದರು ಯಾವುದೇ ಕ್ರಮವಹಿಸುತ್ತಿಲ್ಲ ಎಂದು ಸ್ಥಳೀಯರು ಪಾಲಿಕೆ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ನಿತ್ಯ ಈ ರಸ್ತೆಯ ಮಧ್ಯಭಾಗದಲ್ಲಿ ಹಸುಗಳು ಹಾಗೂ ಕುದುರೆಗಳು ರಸ್ತೆ ತುಂಬಾ ಓಡಾಡುತ್ತಿದ್ದು, ಕೆಲವು ವೇಳೆ ವಾಹನಗಳಿಗೆ ಅಡ್ಡಲಾಗಿ ದಿಢೀರ್ ನುಗ್ಗುವುದರಿಂದ ಅಪಘಾತಗಳು ಸಂಭವಿಸುತ್ತಿದೆ.

ಈ ಬಗ್ಗೆ ಆಂದೋಲನದೊಂದಿಗೆ ಮಾಹಿತಿ ಹಂಚಿಕೊಂಡ ಗಂಗೋತ್ರಿ ಲೇಔಟ್‌ನ ನಿವಾಸಿ ನಿವೃತ್ತ ವಿಜ್ಞಾನಿ ಆನಂದ್ ಅವರು, ಈ ಮುಖ್ಯ ರಸ್ತೆಯಲ್ಲಿ ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ಕಾರು, ದ್ವಿಚಕ್ರ ವಾಹನ ಸವಾರರು ಸಂಚರಿಸುತ್ತಾರೆ. ರಸ್ತೆಯಲ್ಲಿ ಹಸುಗಳು, ಕುದುರೆಗಳು ಏಕಾಏಕಿ ನುಗ್ಗುವುದರಿಂದ ಅಪಘಾತಗಳು ಸಂಭವಿಸುತ್ತಿದ್ದು, ಈ ಬಗ್ಗೆ ಪಾಲಿಕೆಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಪಾಲಿಕೆ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

7 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

7 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

7 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

7 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

8 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago