ಮೈಸೂರು ನಗರ

ಮೈಸೂರು| ರಸ್ತೆಯಲ್ಲಿ ಅಡ್ಡಾದಿಡ್ಡಿ ಓಡಾಡುವ ಹಸು-ಕುದುರೆಗಳು: ಭಯದಲ್ಲಿ ವಾಹನ ಸವಾರರು

ಮೈಸೂರು: ಇಲ್ಲಿನ ಗಂಗೋತ್ರಿ ಲೇಔಟ್ ಬಳಿಯ ಮಾರುತಿ ಟೆಂಪಲ್ ರಸ್ತೆಯಲ್ಲಿ ಬೀದಿ ಹಸು ಹಾಗೂ ಕುದುರೆಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರು ಭಯದಲ್ಲಿ ಸಂಚಾರ ಮಾಡುವ ಪರಿಸ್ಥಿತಿ ಎದುರಾಗಿದೆ.

ರಸ್ತೆಯಲ್ಲಿ ಈಗಾಗಲೇ ಹಲವಾರು ಬಾರಿ ಅಪಘಾತಗಳು ಸಂಭವಿಸಿದ್ದು, ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಿದರು ಯಾವುದೇ ಕ್ರಮವಹಿಸುತ್ತಿಲ್ಲ ಎಂದು ಸ್ಥಳೀಯರು ಪಾಲಿಕೆ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ನಿತ್ಯ ಈ ರಸ್ತೆಯ ಮಧ್ಯಭಾಗದಲ್ಲಿ ಹಸುಗಳು ಹಾಗೂ ಕುದುರೆಗಳು ರಸ್ತೆ ತುಂಬಾ ಓಡಾಡುತ್ತಿದ್ದು, ಕೆಲವು ವೇಳೆ ವಾಹನಗಳಿಗೆ ಅಡ್ಡಲಾಗಿ ದಿಢೀರ್ ನುಗ್ಗುವುದರಿಂದ ಅಪಘಾತಗಳು ಸಂಭವಿಸುತ್ತಿದೆ.

ಈ ಬಗ್ಗೆ ಆಂದೋಲನದೊಂದಿಗೆ ಮಾಹಿತಿ ಹಂಚಿಕೊಂಡ ಗಂಗೋತ್ರಿ ಲೇಔಟ್‌ನ ನಿವಾಸಿ ನಿವೃತ್ತ ವಿಜ್ಞಾನಿ ಆನಂದ್ ಅವರು, ಈ ಮುಖ್ಯ ರಸ್ತೆಯಲ್ಲಿ ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ಕಾರು, ದ್ವಿಚಕ್ರ ವಾಹನ ಸವಾರರು ಸಂಚರಿಸುತ್ತಾರೆ. ರಸ್ತೆಯಲ್ಲಿ ಹಸುಗಳು, ಕುದುರೆಗಳು ಏಕಾಏಕಿ ನುಗ್ಗುವುದರಿಂದ ಅಪಘಾತಗಳು ಸಂಭವಿಸುತ್ತಿದ್ದು, ಈ ಬಗ್ಗೆ ಪಾಲಿಕೆಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಪಾಲಿಕೆ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

5 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

32 mins ago

ಪಡಿತರ ವಿತರಣೆ | ಸಮಯ ಬದಲಾವಣೆ

ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…

1 hour ago

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

11 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

11 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

13 hours ago