Mysore | Cows and horses roaming on the road: Motorists in fear
ಮೈಸೂರು: ಇಲ್ಲಿನ ಗಂಗೋತ್ರಿ ಲೇಔಟ್ ಬಳಿಯ ಮಾರುತಿ ಟೆಂಪಲ್ ರಸ್ತೆಯಲ್ಲಿ ಬೀದಿ ಹಸು ಹಾಗೂ ಕುದುರೆಗಳ ಕಾಟ ಹೆಚ್ಚಾಗಿದ್ದು, ವಾಹನ ಸವಾರರು ಭಯದಲ್ಲಿ ಸಂಚಾರ ಮಾಡುವ ಪರಿಸ್ಥಿತಿ ಎದುರಾಗಿದೆ.
ರಸ್ತೆಯಲ್ಲಿ ಈಗಾಗಲೇ ಹಲವಾರು ಬಾರಿ ಅಪಘಾತಗಳು ಸಂಭವಿಸಿದ್ದು, ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಿದರು ಯಾವುದೇ ಕ್ರಮವಹಿಸುತ್ತಿಲ್ಲ ಎಂದು ಸ್ಥಳೀಯರು ಪಾಲಿಕೆ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿ ನಿತ್ಯ ಈ ರಸ್ತೆಯ ಮಧ್ಯಭಾಗದಲ್ಲಿ ಹಸುಗಳು ಹಾಗೂ ಕುದುರೆಗಳು ರಸ್ತೆ ತುಂಬಾ ಓಡಾಡುತ್ತಿದ್ದು, ಕೆಲವು ವೇಳೆ ವಾಹನಗಳಿಗೆ ಅಡ್ಡಲಾಗಿ ದಿಢೀರ್ ನುಗ್ಗುವುದರಿಂದ ಅಪಘಾತಗಳು ಸಂಭವಿಸುತ್ತಿದೆ.
ಈ ಬಗ್ಗೆ ಆಂದೋಲನದೊಂದಿಗೆ ಮಾಹಿತಿ ಹಂಚಿಕೊಂಡ ಗಂಗೋತ್ರಿ ಲೇಔಟ್ನ ನಿವಾಸಿ ನಿವೃತ್ತ ವಿಜ್ಞಾನಿ ಆನಂದ್ ಅವರು, ಈ ಮುಖ್ಯ ರಸ್ತೆಯಲ್ಲಿ ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ಕಾರು, ದ್ವಿಚಕ್ರ ವಾಹನ ಸವಾರರು ಸಂಚರಿಸುತ್ತಾರೆ. ರಸ್ತೆಯಲ್ಲಿ ಹಸುಗಳು, ಕುದುರೆಗಳು ಏಕಾಏಕಿ ನುಗ್ಗುವುದರಿಂದ ಅಪಘಾತಗಳು ಸಂಭವಿಸುತ್ತಿದ್ದು, ಈ ಬಗ್ಗೆ ಪಾಲಿಕೆಗೆ ದೂರು ನೀಡಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಪಾಲಿಕೆ ವಿರುದ್ಧ ಕಿಡಿಕಾರಿದರು.
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…