ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆ ಗಜಪಡೆಗೆ ಇಂದು ( ಸೆಪ್ಟೆಂಬರ್ 26 ) ಕುಶಾಲತೋಪು ತಾಲೀಮು ನಡೆಸಲಾಯಿತು.
ಮೈಸೂರು ದಸರಾ ಜಂಬೂ ಸವಾರಿ ಸಲುವಾಗಿ ಕಾಡಿನಿಂದ ನಾಡಿಗೆ ಆಗಮಿಸಿರುವ ಎಲ್ಲಾ 14ಆನೆಗಳು ಕೂಡ ಇದರಲ್ಲಿ ಭಾಗಿಯಾಗಿದ್ದವು. ಇನ್ನು ಕುಶಾಲು ತೋಪು ಸಿಡಿಸುವಾಗ ಯಾವುದೇ ಆನೆ ಶಬ್ದಕ್ಕೆ ಬೆಚ್ಚದೇ ಭಾಗವಹಿಸಿದವು.
ಏಕಲವ್ಯ ಆನೆ ಮೊದಲ ಬಾರಿ ಆಗಮಿಸಿದ್ದರೂ ಸಹ ಬೆಚ್ಚದೇ ನಿಂತಿತ್ತು. ಕುಶಾಲತೋಪು ಯಶಸ್ವಿಯಾಗಿದ್ದು, ಎಲ್ಲಾ ಆನೆಗಳ ಆರೋಗ್ಯ ಕೂಡ ಚೆನ್ನಾಗಿದೆ. ಇನ್ನು ಎರಡು ಭಾರಿ ಕುಶಾಲತೋಪು ಸಿಡಿಸುವ ತಾಲೀಮು ನಡೆಸುತ್ತೇವೆ.
ಶ್ರೀರಂಗಪಟ್ಟಣ ದಸರಾಗೆ ಆನೆಗಳ ಆಯ್ಕೆ ವಿಚಾರವಾಗಿ ಮಹೇಂದ್ರ, ಹಿರಣ್ಯ ಲಕ್ಷ್ಮಿ ಆನೆಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಲ್ಲಾ ಆನೆಗಳ ಸಾಮರ್ಥ್ಯ ಪರೀಕ್ಷೆ ಮಾಡಿ ಮೂರು ಆನೆಗಳ ಪ್ರಸ್ತಾವನೆ ಕಳುಹಿಸಿದ್ದೇವೆ. ಫೈನಲ್ ಮಾಡುವ ಜವಾಬ್ದಾರಿ ಮೇಲ್ಮಟ್ಟದ ಅಧಿಕಾರಿಗಳ ಜವಾಬ್ದಾರಿ. ದಸರಾ ಜಂಬುಸವಾರಿಯಲ್ಲಿನ ನೌಪತ್ ಆನೆ, ನಿಶಾನೆ ಆನೆಗಳನ್ನ ಸದ್ಯದಲ್ಲೇ ಫೈನಲ್ ಮಾಡುತ್ತೇವೆ ಎಂದು ಡಿಸಿಎಫ್ ಡಾ ಪ್ರಭುಗೌಡ ಹೇಳಿಕೆ ನೀಡಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…