ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆ ಗಜಪಡೆಗೆ ಇಂದು ( ಸೆಪ್ಟೆಂಬರ್ 26 ) ಕುಶಾಲತೋಪು ತಾಲೀಮು ನಡೆಸಲಾಯಿತು.
ಮೈಸೂರು ದಸರಾ ಜಂಬೂ ಸವಾರಿ ಸಲುವಾಗಿ ಕಾಡಿನಿಂದ ನಾಡಿಗೆ ಆಗಮಿಸಿರುವ ಎಲ್ಲಾ 14ಆನೆಗಳು ಕೂಡ ಇದರಲ್ಲಿ ಭಾಗಿಯಾಗಿದ್ದವು. ಇನ್ನು ಕುಶಾಲು ತೋಪು ಸಿಡಿಸುವಾಗ ಯಾವುದೇ ಆನೆ ಶಬ್ದಕ್ಕೆ ಬೆಚ್ಚದೇ ಭಾಗವಹಿಸಿದವು.
ಏಕಲವ್ಯ ಆನೆ ಮೊದಲ ಬಾರಿ ಆಗಮಿಸಿದ್ದರೂ ಸಹ ಬೆಚ್ಚದೇ ನಿಂತಿತ್ತು. ಕುಶಾಲತೋಪು ಯಶಸ್ವಿಯಾಗಿದ್ದು, ಎಲ್ಲಾ ಆನೆಗಳ ಆರೋಗ್ಯ ಕೂಡ ಚೆನ್ನಾಗಿದೆ. ಇನ್ನು ಎರಡು ಭಾರಿ ಕುಶಾಲತೋಪು ಸಿಡಿಸುವ ತಾಲೀಮು ನಡೆಸುತ್ತೇವೆ.
ಶ್ರೀರಂಗಪಟ್ಟಣ ದಸರಾಗೆ ಆನೆಗಳ ಆಯ್ಕೆ ವಿಚಾರವಾಗಿ ಮಹೇಂದ್ರ, ಹಿರಣ್ಯ ಲಕ್ಷ್ಮಿ ಆನೆಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಲ್ಲಾ ಆನೆಗಳ ಸಾಮರ್ಥ್ಯ ಪರೀಕ್ಷೆ ಮಾಡಿ ಮೂರು ಆನೆಗಳ ಪ್ರಸ್ತಾವನೆ ಕಳುಹಿಸಿದ್ದೇವೆ. ಫೈನಲ್ ಮಾಡುವ ಜವಾಬ್ದಾರಿ ಮೇಲ್ಮಟ್ಟದ ಅಧಿಕಾರಿಗಳ ಜವಾಬ್ದಾರಿ. ದಸರಾ ಜಂಬುಸವಾರಿಯಲ್ಲಿನ ನೌಪತ್ ಆನೆ, ನಿಶಾನೆ ಆನೆಗಳನ್ನ ಸದ್ಯದಲ್ಲೇ ಫೈನಲ್ ಮಾಡುತ್ತೇವೆ ಎಂದು ಡಿಸಿಎಫ್ ಡಾ ಪ್ರಭುಗೌಡ ಹೇಳಿಕೆ ನೀಡಿದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…