ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಯುವ ದಸರಾವನ್ನು ಅದ್ದೂರಿಯಾಗಿ ಅ.6 ರಿಂದ 10 ರವರೆಗೆ ಉತ್ತನಹಳ್ಳಿ ತ್ರಿಪುರ ಸುಂದರಿ ದೇವಸ್ಥಾನದ ಬಳಿ ಇರುವ ಯಾಲಿಗೆಹುಂಡಿ ಹತ್ತಿರ ಮೈದಾನದಲ್ಲಿ ಆಯೋಜಿಸಲಾಗಿದೆ.
ಈ ಬಾರಿಯ ಯುವ ದಸರಾಗೆ ಖ್ಯಾತ ಬಹುಭಾಷಾ ಗಾಯಕರು, ಸಂಗೀತ ನಿರ್ದೇಶಕರಾದ ಎ.ಆರ್. ರಹಮಾನ್ ಮತ್ತು ಇಳಯರಾಜ ಆಗಮಿಸುತ್ತಿರುವುದು ವಿಶೇಷವಾಗಿದೆ. ಮೊದಲಿಗೆ ಶ್ರೇಯಾ ಘೋಷಾಲ್ ಕಾರ್ಯಕ್ರಮವಿರಲಿದ್ದು, ಯಾವ ದಿನದಂದು ಯಾವ ಕಲಾವಿದರು ಪ್ರದರ್ಶನ ನೀಡಲಿದ್ದಾರೆ ಎಂಬ ಮಾಹಿತಿ ಈ ಕೆಳಕಂಡಂತಿದೆ.
ಅ.6 – ಸಂಗೀತ ರಸಸಂಜೆ ಕಾರ್ಯಕ್ರಮಕ್ಕೆ ಬಹುಭಾಷಾ ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್,
ಅ.7 – ಸಂಗೀತ ಸಂಜೆ – ಸ್ಯಾಂಡಲ್ವುಡ್ ಸಂಗೀತ ನಿರ್ದೇಶಕ ರವಿ ಬಸ್ರೂರು
ಅ.8 – ಬಾಲಿವುಡ್ ನೈಟ್ಸ್ – ಬಾಲಿವುಡ್ ಗಾಯಕ ಬಾದ್ಷಾ
ಅ.9 – ಸಂಗೀತ ಸಂಜೆ – ಸಂಗೀತ ನಿರ್ದೇಶಕ ಮತ್ತು ಗಾಯಕ ಎ.ಆರ್.ರೆಹಮಾನ್
ಅ.10ರ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಖ್ಯಾತ ಸಂಗೀತ್ ನಿರ್ದೇಶಕ ಇಳಯರಾಜ
ಯುವ ಸಂಭ್ರಮದ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಶಾಲಾ-ಕಾಲೇಜು ತಂಡಗಳು ಯುವ ದಸರಾ ಕಾರ್ಯಕ್ರಮದಲ್ಲಿಯೂ ಸಹ ನೃತ್ಯ ಪ್ರದರ್ಶನ ನೀಡುತ್ತವೆ.
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…