ಮೈಸೂರು ನಗರ

Mysore Dasara 2024: ಈ ಬಾರಿಯ ಯುವ ದಸರಾಗೆ ಬರಲಿದ್ದಾರೆ ಇಳಯರಾಜ, ಎಆರ್‌ ರಹಮಾನ್‌

 

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವ ಪ್ರಯುಕ್ತ ಯುವ ದಸರಾವನ್ನು ಅದ್ದೂರಿಯಾಗಿ ಅ.6 ರಿಂದ 10 ರವರೆಗೆ ಉತ್ತನಹಳ್ಳಿ ತ್ರಿಪುರ ಸುಂದರಿ ದೇವಸ್ಥಾನದ ಬಳಿ ಇರುವ ಯಾಲಿಗೆಹುಂಡಿ ಹತ್ತಿರ ಮೈದಾನದಲ್ಲಿ ಆಯೋಜಿಸಲಾಗಿದೆ.

ಈ ಬಾರಿಯ ಯುವ ದಸರಾಗೆ ಖ್ಯಾತ ಬಹುಭಾಷಾ ಗಾಯಕರು, ಸಂಗೀತ ನಿರ್ದೇಶಕರಾದ ಎ.ಆರ್.‌ ರಹಮಾನ್‌ ಮತ್ತು ಇಳಯರಾಜ ಆಗಮಿಸುತ್ತಿರುವುದು ವಿಶೇಷವಾಗಿದೆ. ಮೊದಲಿಗೆ ಶ್ರೇಯಾ ಘೋಷಾಲ್‌ ಕಾರ್ಯಕ್ರಮವಿರಲಿದ್ದು, ಯಾವ ದಿನದಂದು ಯಾವ ಕಲಾವಿದರು ಪ್ರದರ್ಶನ ನೀಡಲಿದ್ದಾರೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಅ.6 – ಸಂಗೀತ ರಸಸಂಜೆ ಕಾರ್ಯಕ್ರಮಕ್ಕೆ ಬಹುಭಾಷಾ ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್‌,

ಅ.7 – ಸಂಗೀತ ಸಂಜೆ – ಸ್ಯಾಂಡಲ್‌ವುಡ್‌ ಸಂಗೀತ ನಿರ್ದೇಶಕ ರವಿ ಬಸ್ರೂರು ‌

ಅ.8 – ಬಾಲಿವುಡ್‌ ನೈಟ್ಸ್‌ – ಬಾಲಿವುಡ್‌ ಗಾಯಕ ಬಾದ್‌ಷಾ

ಅ.9 – ಸಂಗೀತ ಸಂಜೆ – ಸಂಗೀತ ನಿರ್ದೇಶಕ ಮತ್ತು ಗಾಯಕ ಎ.ಆರ್‌.ರೆಹಮಾನ್‌

ಅ.10ರ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಖ್ಯಾತ ಸಂಗೀತ್‌ ನಿರ್ದೇಶಕ ಇಳಯರಾಜ

ಯುವ ಸಂಭ್ರಮದ ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ಶಾಲಾ-ಕಾಲೇಜು ತಂಡಗಳು ಯುವ ದಸರಾ ಕಾರ್ಯಕ್ರಮದಲ್ಲಿಯೂ ಸಹ ನೃತ್ಯ ಪ್ರದರ್ಶನ ನೀಡುತ್ತವೆ.

ಅರ್ಚನ ಎಸ್‌ ಎಸ್

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

5 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago