ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಮುಗಿದ ಬಳಿಕ ಪೌರ ಕಾರ್ಮಿಕರು ಕಸ ತೆರವುಗೊಳಿಸಿದ್ದಾರೆ.
ಜಂಬೂಸವಾರಿ ಮೆರವಣಿಗೆ ಬಳಿಕ ಇಡೀ ಮೈಸೂರು ನಗರ ಪ್ಲಾಸ್ಟಿಕ್ ಮಯವಾಗಿತ್ತು. ಅದರಲ್ಲೂ ಮುಖ್ಯವಾಗಿ ಜಂಬೂಸವಾರಿ ಸಾಗಿದ ರಾಜಮಾರ್ಗದಲ್ಲಿ ಪ್ಲಾಸ್ಟಿಕ್ ರಾಶಿಯೇ ಕಂಡುಬಂದಿತ್ತು.
ಜಂಬೂಸವಾರಿ ಮುಗಿದ ಬಳಿಕ ಅಂದರೆ ಶನಿವಾರ ತಡರಾತ್ರಿಯಿಂದಲೇ ಸ್ವಚ್ಛತಾ ಕಾರ್ಯ ನಿರ್ವಹಿಸಿದ ಪೌರ ಕಾರ್ಮಿಕರು ಬರೋಬ್ಬರಿ ಒಂದಲ್ಲಾ ಎರಡಲ್ಲಾ ಬರೋಬ್ಬರಿ 80 ಟನ್ಗಳಷ್ಟು ಕಸ ಸಂಗ್ರಹಿಸಿದ್ದಾರೆ.
ಇದರಲ್ಲಿ 22 ಟನ್ಗಳಷ್ಟು ಕಸ ಪ್ಲಾಸ್ಟಿಕ್ ಕಸವಾಗಿದೆ ಎಂದು ತಿಳಿದುಬಂದಿದೆ.
ಇನ್ನು ಅರಮನೆ ಆವರಣ, ಜಂಬೂಸವಾರಿ ಮೆರವಣಿಗೆ ಮಾರ್ಗ, ಆಹಾರ ಮೇಳ, ಫಲಪುಷ್ಪ ಪ್ರದರ್ಶನ ಆಯೋಜಿಸಿದ್ದ ಸ್ಥಳಗಳಲ್ಲಿ ಬಹಳಷ್ಟು ಕಸ ಸಂಗ್ರಹವಾಗಿದ್ದು, ಪೌರ ಕಾರ್ಮಿಕರು ನಗರವನ್ನು ಸ್ವಚ್ಛ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…