ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಲಿದ್ದಾರೆ.
ಈ ಬಾರಿಯ ದಸರೆಗೆ 20 ಸಾವಿರಕ್ಕಿಂತ ಹೆಚ್ಚಿನ ಪ್ರವಾಸಿಗರು ಬರಬಹುದೆಂದು ಅಂದಾಜು ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ಸವಾಲು ಪೊಲೀಸ್ ಇಲಾಖೆಗೆ ಇದೆ.
ಇದೆಲ್ಲವನ್ನು ನಿಭಾಯಿಸಿಕೊಂಡು ಹೋಗಲು ಹೆಚ್ಚುವರಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಒದಗಿಸಬೇಕು ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು, ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಾರಿಯ ದಸರಾ ಕಾರ್ಯಕ್ರಮಗಳ ಸಾಲಿಗೆ ಡ್ರೋನ್ ಶೋ ಸೇರಿಕೊಂಡಿರುವ ಹಿನ್ನೆಲೆಯಲ್ಲಿ ಅದಕ್ಕೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದೆ. ಹೀಗಾಗಿ ಆ ಕಾರ್ಯಕ್ರಮ ನಡೆಯುವ ಸ್ಥಳಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಬೇಕೆಂದು ಮನವಿ ಮಾಡಲಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…