ಮೈಸೂರು ನಗರ

ಮೈಸೂರು ದಸರಾ ಮಹೋತ್ಸವ: ಸೆಪ್ಟೆಂಬರ್.‌5ಕ್ಕೆ ಎರಡನೇ ಹಂತದ ಗಜಪಡೆ ಆಗಮನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ರೀತಿಯಲ್ಲೂ ಸಿದ್ಧತೆ ನಡೆಯುತ್ತಿದ್ದು, ಸೆಪ್ಟೆಂಬರ್.‌5ರಂದು ಮೈಸೂರಿಗೆ ಎರಡನೇ ಹಂತದ ಗಜಪಡೆ ಆಗಮಿಸಲಿವೆ.

ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು 14 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು, ಈಗಾಗಲೇ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಮೈಸೂರಿನಲ್ಲಿ ಬೀಡುಬಿಟ್ಟಿವೆ.

ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ತಾಲೀಮು ನಡೆಸಲಾಗುತ್ತಿದೆ. ಬೆಳಿಗ್ಗೆ ಹಾಗೂ ಸಂಜೆ ರಾಜಬೀದಿಯಲ್ಲಿ ಕ್ಯಾಪ್ಟನ್‌ ಅಭಿಮನ್ಯುವನ್ನು ನೋಡಲು ಜನರು ಜಮಾಯಿಸುತ್ತಾರೆ.

ಇನ್ನು ಸೆಪ್ಟೆಂಬರ್.‌5 ರಂದು ಮೈಸೂರಿಗೆ ಎರಡನೇ ಹಂತದಲ್ಲಿ ದುಬಾರೆ ಆನೆ ಶಿಬಿರದಿಂದ ಪ್ರಶಾಂತ್‌, ಸುಗ್ರೀವಾ, ಮತ್ತಿಗೋಡು ಆನೆ ಶಿಬಿರದಿಂದ ಮಹೇಂದ್ರ, ದೊಡ್ಡ ಹರವೇ ಶಿಬಿರದಿಂದ ಲಕ್ಷ್ಮೀ, ರಾಮಂಪುರ ಆನೆ ಶಿಬಿರದಿಂದ ಈರಣ್ಯ ಆನೆಗಳು ಆಗಮಿಸಲಿವೆ.

ಈ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಹೆಚ್ಚುವರಿ ಗಜಪಡೆ, ಕಾವಾಡಿ, ಮಾವುತರಿಗಾಗಿ ತಂಗುದಾಣ ನಿರ್ಮಾಣ ಮಾಡಲಾಗುತ್ತಿದೆ. ಆನೆಗಳ ವಾಸ್ತವ್ಯಕ್ಕೂ ಹೆಚ್ಚುವರಿ ತಾತ್ಕಾಲಿಕ ಶೆಡ್‌ ನಿರ್ಮಾಣ ಕಾರ್ಯದಲ್ಲಿ ಕಾರ್ಮಿಕರು ಬ್ಯುಸಿಯಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

11 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

12 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

13 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

13 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

14 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

14 hours ago