ಮೈಸೂರು ನಗರ

ಮೈಸೂರು ದಸರಾ ಮಹೋತ್ಸವ: ಸೆಪ್ಟೆಂಬರ್.‌5ಕ್ಕೆ ಎರಡನೇ ಹಂತದ ಗಜಪಡೆ ಆಗಮನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ರೀತಿಯಲ್ಲೂ ಸಿದ್ಧತೆ ನಡೆಯುತ್ತಿದ್ದು, ಸೆಪ್ಟೆಂಬರ್.‌5ರಂದು ಮೈಸೂರಿಗೆ ಎರಡನೇ ಹಂತದ ಗಜಪಡೆ ಆಗಮಿಸಲಿವೆ.

ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು 14 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು, ಈಗಾಗಲೇ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಮೈಸೂರಿನಲ್ಲಿ ಬೀಡುಬಿಟ್ಟಿವೆ.

ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ತಾಲೀಮು ನಡೆಸಲಾಗುತ್ತಿದೆ. ಬೆಳಿಗ್ಗೆ ಹಾಗೂ ಸಂಜೆ ರಾಜಬೀದಿಯಲ್ಲಿ ಕ್ಯಾಪ್ಟನ್‌ ಅಭಿಮನ್ಯುವನ್ನು ನೋಡಲು ಜನರು ಜಮಾಯಿಸುತ್ತಾರೆ.

ಇನ್ನು ಸೆಪ್ಟೆಂಬರ್.‌5 ರಂದು ಮೈಸೂರಿಗೆ ಎರಡನೇ ಹಂತದಲ್ಲಿ ದುಬಾರೆ ಆನೆ ಶಿಬಿರದಿಂದ ಪ್ರಶಾಂತ್‌, ಸುಗ್ರೀವಾ, ಮತ್ತಿಗೋಡು ಆನೆ ಶಿಬಿರದಿಂದ ಮಹೇಂದ್ರ, ದೊಡ್ಡ ಹರವೇ ಶಿಬಿರದಿಂದ ಲಕ್ಷ್ಮೀ, ರಾಮಂಪುರ ಆನೆ ಶಿಬಿರದಿಂದ ಈರಣ್ಯ ಆನೆಗಳು ಆಗಮಿಸಲಿವೆ.

ಈ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಹೆಚ್ಚುವರಿ ಗಜಪಡೆ, ಕಾವಾಡಿ, ಮಾವುತರಿಗಾಗಿ ತಂಗುದಾಣ ನಿರ್ಮಾಣ ಮಾಡಲಾಗುತ್ತಿದೆ. ಆನೆಗಳ ವಾಸ್ತವ್ಯಕ್ಕೂ ಹೆಚ್ಚುವರಿ ತಾತ್ಕಾಲಿಕ ಶೆಡ್‌ ನಿರ್ಮಾಣ ಕಾರ್ಯದಲ್ಲಿ ಕಾರ್ಮಿಕರು ಬ್ಯುಸಿಯಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

4 hours ago

ಕೊಡಗಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…

4 hours ago

ತಮಿಳುನಾಡಿಗೆ ನೀರು; 72 ಅಡಿಗೆ ಕುಸಿದ ಕಬಿನಿ ಜಲಾಶಯ

ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ  ಎಚ್.ಡಿ.ಕೋಟೆ: ಈ ಬಾರಿ…

4 hours ago

ಮೇವಿನ ಕೊರತೆ; ಹಸಿರು ಮೇವು ಖರೀದಿಗೆ ಮುಂದಾದ ರೈತರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…

4 hours ago

ಗಜಪಯಣಕ್ಕೆ ನಡೆದಿದೆ ಭರದ ಸಿದ್ಧತೆ

ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು  ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…

4 hours ago