ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಗೆ ವಿಶೇಷ ಆಹಾರ ನೀಡಲು ಶುರು ಮಾಡಲಾಗಿದೆ.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಸೇರಿದಂತೆ ಮೈಸೂರಿನಲ್ಲಿ ದಸರೆಗಾಗಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ.
ಈ ಬೆನ್ನಲ್ಲೇ ಕಾಡಿನಿಂದ ನಾಡಿಗೆ ಬಂದಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ವಿಶೇಷ ಆಹಾರ ನೀಡಲು ಶುರು ಮಾಡಲಾಗಿದೆ.
ನಿನ್ನೆಯಷ್ಟೇ ದಸರಾ ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಗಿದ್ದು, ಆನೆಯ ತೂಕದ ಆಧಾರದ ಮೇಲೆ ಪೌಷ್ಠಿಕ ಆಹಾರ ನೀಡಲಾಗುತ್ತಿದೆ.
ಪೌಷ್ಠಿಕ ಆಹಾರ ತಯಾರಿಕೆಗೆಂದೇ ಹಲವು ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು, ಆನೆಗಳ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ವಹಿಸಲಾಗಿದೆ.
ದಸರಾ ಮುಗಿಯುವವರೆಗೂ ಗಜಪಡೆಗೆ ಪೌಷ್ಠಿಕ ಆಹಾರವನ್ನೇ ನೀಡಲಾಗುತ್ತದೆ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದು, ಜಂಬೂಸವಾರಿ ಯಶಸ್ವಿಗೆ ಮಾವುತರು, ಕಾವಾಡಿಗರು ಸೇರಿದಂತೆ ಅಧಿಕಾರಿ ವರ್ಗ ಈಗಿನಿಂದಲೇ ಶ್ರಮ ವಹಿಸುತ್ತಿದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…