ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಅರಮನೆಗೆ ಗಜಪಡೆಯ 2ನೇ ತಂಡ ಆಗಮಿಸಲಿವೆ.
ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಲು ಇಂದು ಅರಮನೆಗೆ 2ನೇ ತಂಡದ ಗಜಪಡೆ ಮೈಸೂರು ಅರಮನೆಗೆ ಆಗಮಿಸಲಿದ್ದು, ಇದಕ್ಕಾಗಿ ಅರಮನೆ ಆಡಳಿತ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.
ಅರಮನೆಯಲ್ಲಿ ಸಂಜೆ ಐದು ಗಂಟೆಗೆ ಮಹೇಂದ್ರ ನೇತೃತ್ವದ ಐದು ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಲಾಗುತ್ತದೆ.
ಮತ್ತಿಗೋಡು ಆನೆ ಶಿಬಿರದಿಂದ ಮಹೇಂದ್ರ, ದುಬಾರೆ ಶಿಬಿರದಿಂದ ಪ್ರಶಾಂತ, ಸುಗ್ರೀವ, ರಾಮಂಪುರ ಶಿಬಿರದಿಂದ ಲಕ್ಷ್ಮಿ ಹಾಗೂ ಹಿರಣ್ಯ ಆನೆಗಳು ಇಂದು ಅರಮನೆಗೆ ಆಗಮಿಸಲಿವೆ.
ಈಗಾಗಲೇ ಅಂಬಾರಿ ಆನೆ ಅಭಿಮನ್ಯು ನೇತೃತ್ವದ ಮೊದಲ ತಂಡದ ಭೀಮ, ಧನಂಜಯ, ಗೋಪಿ, ವರಲಕ್ಷ್ಮಿ, ಲಕ್ಷ್ಮಿ, ಕಂಜನ್, ರೋಹಿತ್ ಹಾಗೂ ಏಕಲವ್ಯ ಆನೆಗಳು ಅರಮನೆಯಲ್ಲಿ ಬೀಡುಬಿಟ್ಟಿದ್ದು, ನಗರದ ವಾತಾವರಣಕ್ಕೆ ಹೊಂದಿಕೊಂಡಿವೆ.
ದಸರಾ ಗಜಪಡೆಗೆ ದಿನನಿತ್ಯ ತಾಲೀಮು ನಡೆಸಲಾಗುತ್ತಿದ್ದು, ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಮ್ಗೆ ನಿತ್ಯ ಅರಮನೆಯಿಂದ ಬನ್ನಿಮಂಟಪದವರೆಗೆ ನಡಿಗೆ ಹಾಗೂ ಭಾರ ಹೊರುವ ತಾಲೀಮು ನಡೆಸಲಾಗುತ್ತಿದೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…