ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಕಾಡಿನಿಂದ ನಾಡಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದೆ.
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗಳು ಮೊದಲ ದಿನವಾದ ಇಂದು ರಾಜಬೀದಿಗಳಲ್ಲಿ ಗಜ ಗಾಂಭೀರ್ಯದಿಂದ ಹೆಜ್ಜೆ ಹಾಕಿವೆ. ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ ದಸರಾ ಗಜಪಡೆಗಳಿಗೆ ತಾಲೀಮು ಆರಂಭಿಸಲಾಗಿದೆ. ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ವೇಳೆ ದಸರಾ ಗಜಪಡೆ ವಾಕಿಂಗ್ ಮಾಡಲಿವೆ.
ಮೊದಲ ಹಂತದಲ್ಲಿ ಕಾಡಿನಿಂದ ಮೈಸೂರು ಅರಮನೆಗೆ 9 ಆನೆಗಳು ಆಗಮಿಸಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ತಾಲೀಮು ಆರಂಭಿಸಲಾಗಿದೆ. ಜಂಬೂಸವಾರಿ ದಿನದಂದು ಯಾವುದೇ ತೊಂದರೆಯಾಗದಿರಲಿ ಎಂದು ದಸರಾ ಗಜಪಡೆಗೆ ತಾಲೀಮು ನಡೆಸಲಾಗುತ್ತಿದ್ದು, ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ಅರಮನೆಯಿಂದ ಬನ್ನಿಮಂಟಪದವರೆಗೆ 5 ಕಿ.ಮೀ ತಾಲೀಮು ನಡೆಯಲಿದೆ.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…