ಮೈಸೂರು ನಗರ

ಮೈಸೂರು: ಫೆ.10 ರಿಂದ 12ನೇ ತಿರುಮಕೂಡಲ ಮಹಾಕುಂಭಮೇಳ-ಜಿ.ಲಕ್ಷ್ಮೀಕಾಂತ್‌ ರೆಡ್ಡಿ

ಮೈಸೂರು: ಜಿಲ್ಲೆಯ ತಿ.ನರಸೀಪುರದಲ್ಲಿರುವ ಕಾವೇರಿ, ಕಪಿಲಾ ನದಿ ಹಾಗೂ ಸ್ಫಟಿಕ ಸರೋವರಗಳ
ತ್ರಿವೇಣಿ ಸಂಗಮದ ಪುಣ್ಯ ಕ್ಷೇತ್ರವಾದ ತಿರುಮಕೂಡಲಿನಲ್ಲಿ 12ನೇ ಮಹಾಕುಂಭಮೇಳವನ್ನು 2025ರ ಫೆಬ್ರವರಿ 10 ರಿಂದ 12 ರವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ತಿಳಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಇಂದು(ಡಿಸೆಂಬರ್.26)‌ ಸುದ್ದಿಗೋಷ್ಠಿಸಿ ಮಾತನಾಡಿದ ಅವರು, ಆರು ವರ್ಷಗಳ ಬಳಿ ಜರುಗುತ್ತಿರುವ ದಕ್ಷಿಣದ ಪ್ರಯಾಗರಾಜ್‌ ಎಂದೇ ಖ್ಯಾತಿಗಳಿಸಿರುವ ತಿರುಮಲಕೂಡಲಿನಲ್ಲಿ 12ನೇ ಮಹಾಕುಂಭಮೇಳವೂ 2025ರ ಫೆಬ್ರವರಿ 10 ರಿಂದ ನಡೆಯಲಿದ್ದು, ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇರುವುದರಿಂದ ಈಗಿನಿಂದಲೇ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಇಲಾಖೆ ಹಾಗೂ ಮಠಾಧೀಶರ ಬಳಗ ಪೂರ್ವಸಿದ್ಧತೆಯನ್ನು ಆರಂಭಿಸಲಾಗಿದೆ ಎಂದಿದ್ದಾರೆ.

ಈ ಮಹಾಕುಂಭ ಮೇಳವನ್ನು ಪ್ರತಿ 3 ವರ್ಷಗಳಿಗೊಮ್ಮೆ ಆಯೋಜಿಸಲಾಗುತ್ತಿದ್ದು, ಈ ಮುಂಚೆ 2019ರಲ್ಲಿ ಕಾರ್ಯಕ್ರಮ ಜರುಗಿತ್ತು. ಬಳಿಕ ಕೋವಿಡ್‌ ಸಂದರ್ಭದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮಹಾಕುಂಭಮೇಳವನ್ನು ರದ್ದುಗೊಳಿಸದ ಕಾರಣ ಅಯೋಜನೆ ಮಾಡಿರಲಿಲ್ಲ. ಆದರೆ ಇದೀಗ 2025ರ ಫೇಬ್ರವರಿಯಲ್ಲಿ ಆಯೋಜನೆ ಮಾಡಲಾಗುತ್ತಿದ್ದು, ಸಿದ್ಧತೆಯ ಕುರಿತು ಚರ್ಚಿಸಲಾಗಿದೆ. ಅಲ್ಲದೇ ಸಕಲ ಸಿದ್ಧತೆಯ ಜವಾಬ್ದಾರಿಯನ್ನು ಹಂಚಿಕೆ ಮಾಡುವುದರ ಜೊತೆಗೆ ರಾಜ್ಯ ಸರ್ಕಾರ ಸಹಕಾರವನ್ನು ಕೋರಲಾಗಿದೆ ಎಂದು ಹೇಳಿದ್ದಾರೆ.

ಇನ್ನು 12ನೇ ಮಹಾಕುಂಭಮೇಳದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ಏರ್ಪಡಿಸಿ, ಮಹಾಕುಂಭಮೇಳ ಜರುಗುವ ಸ್ಥಳಕ್ಕೆ ಶೀಘ್ರದಲ್ಲೇ ಭೇಟಿ ಮಾಡಿ, ಸ್ಥಳವನ್ನು ಪರಿಶೀಲಿಸಿ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂಬುದನ್ನು ಚರ್ಚಿಸಬೇಕು. ಅಲ್ಲದೇ ಪುಣ್ಯಸ್ನಾನ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

20 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

23 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

23 hours ago