ಮೈಸೂರು ನಗರ

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ.

ವಿಜಯನಗರ 4ನೇ ಹಂತದಲ್ಲಿ ನೆಲೆಸಿರುವ ೪೯ ವರ್ಷದ ವೈದ್ಯರೊಬ್ಬರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ, ತಾನು ಟ್ರಾಯ್ ನೋಟಿಫಿಕೇಷನ್ ವಿಭಾಗದ ಪಿಆರ್‌ಒ ಎಂ.ವಿ.ಅಮಿತ್ ಈ ಶ್ಯಾಂ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮ್ಮ ಹೆಸರಿನಲ್ಲಿರುವ ಸಿಮ್ ಅಪರಾಧ ಕೃತ್ಯಗಳಲ್ಲಿ ಬಳಕೆಯಾಗಿದ್ದು, ಈ ಬಗ್ಗೆ ಮುಂಬೈನ ಬಾಂಧ್ರಾ ಪೊಲೀಸ್ ಠಾಣೆಗೆ ಕರೆ ಮಾಡಿ, ಸ್ಪಷ್ಟನೆ ನೀಡುವಂತೆ ತಿಳಿಸಿದ್ದಾನೆ. ಬಳಿಕ ಆತ ನೀಡಿದ ನಂಬರ್‌ಗೆ ವೈದ್ಯ ವಿಡಿಯೋ ಕರೆ ಮಾಡಿದಾಗ ಕಚೇರಿಯಲ್ಲಿ ಕುಳಿತಿದ್ದ ಪೊಲೀಸ್ ಸಮವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬ ಮಾತನಾಡಿದ್ದಾನೆ.

ನಿಮ್ಮ ಹೆಸರಿನಲ್ಲಿ ಅಶ್ಲೀಲ ವಿಡಿಯೋ ಹಾಗೂ ಕಾನೂನುಬಾಹಿರ ಜಾಹೀರಾತು ಕಳುಹಿಸಿ ಮುಂಬೈನ ಸಾರ್ವಜನಿಕರಿಗೆ ಬೆದರಿಕೆ ಕರೆ ಮಾಡುತ್ತಿರುವುದಾಗಿ ತಿಳಿಸಿ, ಬೆದರಿಸಿದ್ದಾನೆ. ಬಳಿಕ ನಿಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆ ಇದ್ದು, ಅದರಲ್ಲಿ 2 ಕೋಟಿ ರೂ. ಚಲಾವಣೆ ಮಾಡಲಾಗಿದೆ. ನಿಮ್ಮ ಮೇಲ್ ಐಡಿಯನ್ನೂ ಬಳಸಲಾಗಿದೆ.

ಮನಿ ಲ್ಯಾಂಡ್ರಿಂಗ್ ಪ್ರಕರಣದಲ್ಲಿ ನಿಮಗೆ ಮತ್ತು ನಿಮ್ಮ ಪತ್ನಿಗೆ ಅರೆಸ್ಟ್ ವಾರೆಂಟ್ ಆಗಿದೆ ಎಂದು ಮತ್ತಷ್ಟು ಹೆದರಿಸಿದ್ದಾನೆ. ನಂತರ ನಿಮ್ಮ ಹಣ ಹಾಗೂ ಆಸ್ತಿಯನ್ನು ಪರಿಶೀಲಿಸಿದ ನಂತರ ಎನ್‌ಒಸಿ ನೀಡುವುದಾಗಿ ಹೇಳಿ, ನಿಮ್ಮ ಬ್ಯಾಂಕ್ ಖಾತೆಗಳಲ್ಲಿರುವ ಹಣ ವರ್ಗಾವಣೆ ಮಾಡುವಂತೆ ಸೂಚಿಸಿದ್ದಾನೆ.

ವಂಚಕನನ್ನು ನಿಜವಾದ ಪೊಲೀಸ್ ಎಂದು ನಂಬಿದ ವೈದ್ಯ, ಆತ ಕಳುಹಿಸಿದ್ದ ಮೂರು ಖಾತೆಗಳಿಗೆ ಒಟ್ಟು ೮೨ ಲಕ್ಷ ರೂ. ವರ್ಗಾವಣೆ ಮಾಡಿ ಮೋಸ ಹೋಗಿದ್ದಾನೆ. ಈ ಸಂಬಂಧ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿವೃತ್ತರಿಗೆ ೫ ಲಕ್ಷ ರೂ. ವಂಚನೆ 

ನಗರದ ವಿದ್ಯಾರಣ್ಯಪುರಂನ ೭೧ ವರ್ಷದ ನಿವೃತ್ತರೊಬ್ಬರಿಗೆ ಡಿ.೫ ರಂದು ಅಪರಿಚಿತ ಕರೆ ಮಾಡಿ, ಮನಿ ಲ್ಯಾಂಡ್ರಿಂಗ್ ಪ್ರಕರಣದಲ್ಲಿ ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದೇವೆ. ಅರೆಸ್ಟ್ ಮಾಡದಿರಲು ನೀವು ಫೀಸ್ ಕಟ್ಟಬೇಕಾಗುತ್ತದೆ ಎಂದು ಹೇಳಿ ೫ ಲಕ್ಷ ರೂ. ವರ್ಗಾವಣೆ ಮಾಡಿಸಿ ಕೊಂಡು ವಂಚಿಸಿದ್ದಾನೆ. ಈ ಸಂಬಂಧ ಸೆನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

6 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

8 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

8 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

8 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

9 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

10 hours ago