ಮೈಸೂರು ನಗರ

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ.

ವಿಜಯನಗರ 4ನೇ ಹಂತದಲ್ಲಿ ನೆಲೆಸಿರುವ ೪೯ ವರ್ಷದ ವೈದ್ಯರೊಬ್ಬರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ, ತಾನು ಟ್ರಾಯ್ ನೋಟಿಫಿಕೇಷನ್ ವಿಭಾಗದ ಪಿಆರ್‌ಒ ಎಂ.ವಿ.ಅಮಿತ್ ಈ ಶ್ಯಾಂ ಎಂದು ಪರಿಚಯಿಸಿಕೊಂಡಿದ್ದಾನೆ. ನಿಮ್ಮ ಹೆಸರಿನಲ್ಲಿರುವ ಸಿಮ್ ಅಪರಾಧ ಕೃತ್ಯಗಳಲ್ಲಿ ಬಳಕೆಯಾಗಿದ್ದು, ಈ ಬಗ್ಗೆ ಮುಂಬೈನ ಬಾಂಧ್ರಾ ಪೊಲೀಸ್ ಠಾಣೆಗೆ ಕರೆ ಮಾಡಿ, ಸ್ಪಷ್ಟನೆ ನೀಡುವಂತೆ ತಿಳಿಸಿದ್ದಾನೆ. ಬಳಿಕ ಆತ ನೀಡಿದ ನಂಬರ್‌ಗೆ ವೈದ್ಯ ವಿಡಿಯೋ ಕರೆ ಮಾಡಿದಾಗ ಕಚೇರಿಯಲ್ಲಿ ಕುಳಿತಿದ್ದ ಪೊಲೀಸ್ ಸಮವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬ ಮಾತನಾಡಿದ್ದಾನೆ.

ನಿಮ್ಮ ಹೆಸರಿನಲ್ಲಿ ಅಶ್ಲೀಲ ವಿಡಿಯೋ ಹಾಗೂ ಕಾನೂನುಬಾಹಿರ ಜಾಹೀರಾತು ಕಳುಹಿಸಿ ಮುಂಬೈನ ಸಾರ್ವಜನಿಕರಿಗೆ ಬೆದರಿಕೆ ಕರೆ ಮಾಡುತ್ತಿರುವುದಾಗಿ ತಿಳಿಸಿ, ಬೆದರಿಸಿದ್ದಾನೆ. ಬಳಿಕ ನಿಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆ ಇದ್ದು, ಅದರಲ್ಲಿ 2 ಕೋಟಿ ರೂ. ಚಲಾವಣೆ ಮಾಡಲಾಗಿದೆ. ನಿಮ್ಮ ಮೇಲ್ ಐಡಿಯನ್ನೂ ಬಳಸಲಾಗಿದೆ.

ಮನಿ ಲ್ಯಾಂಡ್ರಿಂಗ್ ಪ್ರಕರಣದಲ್ಲಿ ನಿಮಗೆ ಮತ್ತು ನಿಮ್ಮ ಪತ್ನಿಗೆ ಅರೆಸ್ಟ್ ವಾರೆಂಟ್ ಆಗಿದೆ ಎಂದು ಮತ್ತಷ್ಟು ಹೆದರಿಸಿದ್ದಾನೆ. ನಂತರ ನಿಮ್ಮ ಹಣ ಹಾಗೂ ಆಸ್ತಿಯನ್ನು ಪರಿಶೀಲಿಸಿದ ನಂತರ ಎನ್‌ಒಸಿ ನೀಡುವುದಾಗಿ ಹೇಳಿ, ನಿಮ್ಮ ಬ್ಯಾಂಕ್ ಖಾತೆಗಳಲ್ಲಿರುವ ಹಣ ವರ್ಗಾವಣೆ ಮಾಡುವಂತೆ ಸೂಚಿಸಿದ್ದಾನೆ.

ವಂಚಕನನ್ನು ನಿಜವಾದ ಪೊಲೀಸ್ ಎಂದು ನಂಬಿದ ವೈದ್ಯ, ಆತ ಕಳುಹಿಸಿದ್ದ ಮೂರು ಖಾತೆಗಳಿಗೆ ಒಟ್ಟು ೮೨ ಲಕ್ಷ ರೂ. ವರ್ಗಾವಣೆ ಮಾಡಿ ಮೋಸ ಹೋಗಿದ್ದಾನೆ. ಈ ಸಂಬಂಧ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿವೃತ್ತರಿಗೆ ೫ ಲಕ್ಷ ರೂ. ವಂಚನೆ 

ನಗರದ ವಿದ್ಯಾರಣ್ಯಪುರಂನ ೭೧ ವರ್ಷದ ನಿವೃತ್ತರೊಬ್ಬರಿಗೆ ಡಿ.೫ ರಂದು ಅಪರಿಚಿತ ಕರೆ ಮಾಡಿ, ಮನಿ ಲ್ಯಾಂಡ್ರಿಂಗ್ ಪ್ರಕರಣದಲ್ಲಿ ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದೇವೆ. ಅರೆಸ್ಟ್ ಮಾಡದಿರಲು ನೀವು ಫೀಸ್ ಕಟ್ಟಬೇಕಾಗುತ್ತದೆ ಎಂದು ಹೇಳಿ ೫ ಲಕ್ಷ ರೂ. ವರ್ಗಾವಣೆ ಮಾಡಿಸಿ ಕೊಂಡು ವಂಚಿಸಿದ್ದಾನೆ. ಈ ಸಂಬಂಧ ಸೆನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago