ಮೈಸೂರು ನಗರ

ಮೈಸೂರು ದಸರಾ: ಸೆ .26ಕ್ಕೆ ಚಲನಚಿತ್ರೋತ್ಸವದ ಪಾಸ್ ವಿತರಣೆ

ಮೈಸೂರು: ಮೈಸೂರು ದಸರಾ ಮಹೋತ್ಸವ 2024 ರ ಸಂಬಂಧ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಅಕ್ಟೋಬರ್ 04 ರಿಂದ 10 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಹಾಗೂ ಡಿ ಆರ್ ಸಿ ಪರದೆಗಳಲ್ಲಿ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಈ ಸಂಬಂಧ ಸೆಪ್ಟೆಂಬರ್ 26 ರಂದು (ಗುರುವಾರ) ಬೆಳಿಗ್ಗೆ 10.30 ರಿಂದ ಸಂಜೆ 4.30 ರವರೆಗೆ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಿನಿಮಾ ಪ್ರಿಯರಿಗೆ ಚಲನ ಚಿತ್ರೋತ್ಸವ ಪ್ರದರ್ಶನದ ಪಾಸ್ ವಿತರಣೆ ಮಾಡಲಾಗುತ್ತದೆ.

ಚಲನಚಿತ್ರೋತ್ಸವ ಪಾಸ್ ದರ ಸಾಮಾನ್ಯರಿಗೆ 500 ರೂ.ಗಳಾಗಿದ್ದರೆ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ 300 ರೂ.ಗಳಾಗಿರುತ್ತವೆ. ಈ ಪಾಸ್ ಏಳು ದಿನಗಳವರೆಗೂ ಚಾಲ್ತಿಯಲ್ಲಿರುತ್ತದೆ.

ಪಾಸ್ ಪಡೆದುಕೊಳ್ಳಲು ಆಧಾರ್ ಕಾರ್ಡ್ ಪ್ರತಿಯನ್ನು ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಶ್ರೇಯಸ್, ಮೊ.ಸಂ: 7892543852 ಅನ್ನು ಸಂಪರ್ಕಿಸಬಹುದು ಎಂದು ಚಲನಚಿತ್ರೋತ್ಸವ ಉಪಸಮಿತಿಯ ಕಾರ್ಯದರ್ಶಿ ಹರೀಶ್ ಟಿ.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

2 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

2 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

2 hours ago

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

2 hours ago

ಕೊಡಗಿನಲ್ಲಿ ಮತ್ತೆ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…

2 hours ago

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

7 hours ago