ಮೈಸೂರು ನಗರ

ಮೈಸೂರು | ಫ್ಯೂಚರ್‌ ಮಾಡೆಲ್‌ ಆಫ್‌ ಇಂಡಿಯಾ ಶೀರ್ಷಿಕೆಯಡಿ ಡಿ.28ರಂದು ಫ್ಯಾಷನ್‌ ಶೋ

ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ ಫ್ಯಾಷನ್ ಶೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಸ್ತುಪ್ರದರ್ಶನ ಪ್ರಾಧಿಕಾರದ ಸಿಇಒ ರುದ್ರೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ ೫ ಗಂಟೆಗೆ ಪಿ.ಕಾಳಿಂಗರಾವ್ ಗಾನಮಂಟಪ ದಲ್ಲಿ ಅಂತರ ರಾಜ್ಯಮಟ್ಟದ ಫ್ಯಾಷನ್ ಶೋ ನಡೆಯಲಿದೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳು ನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಭಾರತದಿಂದಲೂ ಸ್ಪರ್ಧಿಗಳು ಆಗಮಿಸುತ್ತಿದ್ದಾರೆ. ಈಗಾಗಲೇ ನೂರಕ್ಕೂ ಹೆಚ್ಚು ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಕಳೆದ ಎರಡು ತಿಂಗಳಿನಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆಡಿಷನ್‌ಗಳನ್ನು ತಿಬ್ಬಾಸ್ ಗ್ರೂಪ್‌ನಿಂದ ನಡೆಸಲಾಗಿದ್ದು, ಅಲ್ಲಿ ಆಯ್ಕೆಯಾದವರು ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿ, ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

ನಮ್ಮ ನಾಡಿನ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಸಾಂಪ್ರದಾಯಿಕ ಹಾಗೂ ಭಾರತದ ಸಂಸ್ಕೃತಿ ಬಿಂಬಿಸುವ ಉಡುಗೆ, ತೊಡುಗೆಗಳನ್ನೇ ಧರಿಸಬೇಕು ಎಂಬ ಷರತ್ತು ವಿಧಿಸಲಾಗಿದೆ. ಇದರ ಜೊತೆಗೆ ನಮ್ಮ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಉಡುಗೆ-ತೊಡುಗೆಗಳನ್ನು ಫ್ಯಾಷನ್ ಉದ್ಯಮಕ್ಕೆ ಪರಿಚಯಿಸುವ ಒಂದು ಮಹತ್ತರವಾದ ಉದ್ದೇಶದೊಂದಿಗೆ ತಿಬ್ಬಾಸ್ ಗ್ರೂಪ್ ಮಾಡೆಲಿಂಗ್ ಕಂಪೆನಿಯ ಮೂಲಕ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದರು.

ಕಾರ್ಯಕ್ರಮಕ್ಕೆ ಚಲನಚಿತ್ರ ನಟರು, ನಿರ್ದೇಶಕರು, ನಿರ್ಮಾಪಕರನ್ನು ಆಹ್ವಾನಿಸಲಾಗಿದೆ. ೨ರಿಂದ ೬೫ ವರ್ಷದವರೆಗಿನ ವಯೋಮಾನದ ಯಾರು ಬೇಕಾದರೂ ವಿವಿಧ ವಿಭಾಗಗಳಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ತಿಬ್ಬಾಸ್ ಗ್ರೂಪ್‌ನ ಸೋಷಿಯಲ್ ಮೀಡಿಯಾಗಳಲ್ಲಿ ಮಾಹಿತಿಯನ್ನು ಪಡೆಯಬಹುದು ಹಾಗೂ ತಿಬ್ಬಾಸ್ ಗ್ರೂಪ್ ಮಾಡೆಲಿಂಗ್ ಕಂಪೆನಿಯ ಮೊ.ಸಂ.: ೯೮೮೦೬ ೪೭೩೯೨ಗೆ ಕರೆ ಮಾಡಿ ಡಿ.೨೭ರೊಳಗೆ ನೇರವಾಗಿ ಹೆಸರು ನೋದಾಯಿಸಿಕೊಳ್ಳಬಹುದು ಎಂದರು.

ತಿಬ್ಬಾಸ್ ಗ್ರೂಪ್ ಮಾಡೆಲಿಂಗ್ ಕಂಪೆನಿಯ ಸಂಸ್ಥಾಪಕರಾದ ಶರ್ವಿನ್, ವ್ಯವಸ್ಥಾಪಕ ನಿರ್ದೇಶಕರಾದ ಐ.ಡಿ.ಶಿವಾನಿ, ದಸರಾ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್, ಭವ್ಯ ಮುಂತಾದವರು ಹಾಜರಿದ್ದರು. ಇದೇ ವೇಳೆ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago