ಮೈಸೂರು ನಗರ

ಮೈಸೂರು | ಫ್ಯೂಚರ್‌ ಮಾಡೆಲ್‌ ಆಫ್‌ ಇಂಡಿಯಾ ಶೀರ್ಷಿಕೆಯಡಿ ಡಿ.28ರಂದು ಫ್ಯಾಷನ್‌ ಶೋ

ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ ಫ್ಯಾಷನ್ ಶೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಸ್ತುಪ್ರದರ್ಶನ ಪ್ರಾಧಿಕಾರದ ಸಿಇಒ ರುದ್ರೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ ೫ ಗಂಟೆಗೆ ಪಿ.ಕಾಳಿಂಗರಾವ್ ಗಾನಮಂಟಪ ದಲ್ಲಿ ಅಂತರ ರಾಜ್ಯಮಟ್ಟದ ಫ್ಯಾಷನ್ ಶೋ ನಡೆಯಲಿದೆ. ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳು ನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಭಾರತದಿಂದಲೂ ಸ್ಪರ್ಧಿಗಳು ಆಗಮಿಸುತ್ತಿದ್ದಾರೆ. ಈಗಾಗಲೇ ನೂರಕ್ಕೂ ಹೆಚ್ಚು ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಕಳೆದ ಎರಡು ತಿಂಗಳಿನಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆಡಿಷನ್‌ಗಳನ್ನು ತಿಬ್ಬಾಸ್ ಗ್ರೂಪ್‌ನಿಂದ ನಡೆಸಲಾಗಿದ್ದು, ಅಲ್ಲಿ ಆಯ್ಕೆಯಾದವರು ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿ, ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.

ನಮ್ಮ ನಾಡಿನ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಸಾಂಪ್ರದಾಯಿಕ ಹಾಗೂ ಭಾರತದ ಸಂಸ್ಕೃತಿ ಬಿಂಬಿಸುವ ಉಡುಗೆ, ತೊಡುಗೆಗಳನ್ನೇ ಧರಿಸಬೇಕು ಎಂಬ ಷರತ್ತು ವಿಧಿಸಲಾಗಿದೆ. ಇದರ ಜೊತೆಗೆ ನಮ್ಮ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಉಡುಗೆ-ತೊಡುಗೆಗಳನ್ನು ಫ್ಯಾಷನ್ ಉದ್ಯಮಕ್ಕೆ ಪರಿಚಯಿಸುವ ಒಂದು ಮಹತ್ತರವಾದ ಉದ್ದೇಶದೊಂದಿಗೆ ತಿಬ್ಬಾಸ್ ಗ್ರೂಪ್ ಮಾಡೆಲಿಂಗ್ ಕಂಪೆನಿಯ ಮೂಲಕ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದರು.

ಕಾರ್ಯಕ್ರಮಕ್ಕೆ ಚಲನಚಿತ್ರ ನಟರು, ನಿರ್ದೇಶಕರು, ನಿರ್ಮಾಪಕರನ್ನು ಆಹ್ವಾನಿಸಲಾಗಿದೆ. ೨ರಿಂದ ೬೫ ವರ್ಷದವರೆಗಿನ ವಯೋಮಾನದ ಯಾರು ಬೇಕಾದರೂ ವಿವಿಧ ವಿಭಾಗಗಳಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ತಿಬ್ಬಾಸ್ ಗ್ರೂಪ್‌ನ ಸೋಷಿಯಲ್ ಮೀಡಿಯಾಗಳಲ್ಲಿ ಮಾಹಿತಿಯನ್ನು ಪಡೆಯಬಹುದು ಹಾಗೂ ತಿಬ್ಬಾಸ್ ಗ್ರೂಪ್ ಮಾಡೆಲಿಂಗ್ ಕಂಪೆನಿಯ ಮೊ.ಸಂ.: ೯೮೮೦೬ ೪೭೩೯೨ಗೆ ಕರೆ ಮಾಡಿ ಡಿ.೨೭ರೊಳಗೆ ನೇರವಾಗಿ ಹೆಸರು ನೋದಾಯಿಸಿಕೊಳ್ಳಬಹುದು ಎಂದರು.

ತಿಬ್ಬಾಸ್ ಗ್ರೂಪ್ ಮಾಡೆಲಿಂಗ್ ಕಂಪೆನಿಯ ಸಂಸ್ಥಾಪಕರಾದ ಶರ್ವಿನ್, ವ್ಯವಸ್ಥಾಪಕ ನಿರ್ದೇಶಕರಾದ ಐ.ಡಿ.ಶಿವಾನಿ, ದಸರಾ ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್, ಭವ್ಯ ಮುಂತಾದವರು ಹಾಜರಿದ್ದರು. ಇದೇ ವೇಳೆ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

1 hour ago

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

2 hours ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

3 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

4 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

5 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

6 hours ago