murder (1)
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ ನಡೆದಿದೆ.
ಲಷ್ಕರ್ ಮೊಹಲ್ಲಾ ನಿವಾಸಿ, ಆಟೋ ಚಾಲಕ ಅರ್ಜುನ್ ಎಂಬಾತನೇ ಸ್ನೇಹಿತರಾದ ಗಿರಿದರ್ಶಿನಿ ಬಡಾವಣೆ ನಿವಾಸಿ ದರ್ಶನ್ ಹಾಗೂ ನಿತಿನ್ ಎಂಬವರಿಂದ ಹಲ್ಲೆಗೊಳಗಾದವನು. ಅರ್ಜುನ್ಗೆ ದರ್ಶನ್ ಹಾಗೂ ನಿತಿನ್ ಕೆಲ ದಿನಗಳ ಹಿಂದಷ್ಟೇ ಪರಿಚಿತರಾಗಿರುತ್ತಾರೆ. ಡಿ.೬ ರಂದು ಅರ್ಜುನ್ ಹಾಗೂ ಸ್ನೇಹಿತರು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಕರೆ ಮಾಡಿದ ದರ್ಶನ್ ನನಗೆ ಹಣ ಬೇಕು ಫೋನ್ ಪೇ ಮಾಡು ಎಂದು ಹೇಳಿದ್ದಾನೆ. ಆದರೆ, ನನ್ನ ಬಳಿ ಹಣವಿಲ್ಲ ಎಂದು ಅರ್ಜುನ್ ತಿಳಿಸಿದ್ದಾನೆ. ಇದರಿಂದ ಕೋಪಗೊಂಡ ಆತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ನಡುವೆ ಅರ್ಜುನ್ ಪ್ರವಾಸ ಮುಗಿಸಿ ಡಿ.೭ ರಂದು ಮೈಸೂರಿಗೆ ವಾಪಸ್ಸಾಗಿದ್ದಾನೆ.
ಇದನ್ನು ಓದಿ: ಮೂರು ತಿಂಗಳಲ್ಲಿ ಪಿಎಸ್ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್
ಅಂದು ರಾತ್ರಿ ಕರೆ ಮಾಡಿದ ದರ್ಶನ್ ಸಿದ್ದಾರ್ಥ ಬಡಾವಣೆಗೆ ಬರುವಂತೆ ತಿಳಿಸಿದ್ದಾನೆ. ಹೀಗಾಗಿ ಅರ್ಜುನ್ ಹಾಗೂ ಸ್ನೇಹಿತರಾದ ರವಿ, ಸತೀಶ್ ಹಾಗೂ ಚಂದನ್ ಆಟೋ ಮೂಲಕ ಅಲ್ಲಿಗೆ ತೆರಳಿದ್ದಾರೆ.
ಈ ವೇಳೆ ಅಲ್ಲಿಗೆ ಬಂದ ದರ್ಶನ್ ಹಣದ ವಿಚಾರವಾಗಿ ಜಗಳ ಆರಂಭಿಸಿದ್ದಾನೆ. ನಂತರ ತನ್ನೊಡನೆ ತಂದಿದ್ದ ಚಾಕುವಿನಿಂದ ಅರ್ಜುನ್ಗೆ ಇರಿದು ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ಆತನನ್ನು ಸ್ಥಳದಲ್ಲಿದ್ದ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…