ಮೈಸೂರು ನಗರ

ಮೈಸೂರು| ಸಿಎಂ ಸಿದ್ದರಾಮಯ್ಯ ಮನೆಗೆ ಅತಿಥಿ ಉಪನ್ಯಾಸಕರ ಪ್ರತಿಭಟನಾ ಜಾಥಾ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿರುವ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದ ಅತಿಥಿ ಉಪನ್ಯಾಸಕರನ್ನು ಪೊಲೀಸರು ತಡೆದರು.

ನೂರಾರು ಸಂಖ್ಯೆಯಲ್ಲಿ ಆಗಮಿಸಬೇಕಿದ್ದ ಅತಿಥಿ ಉಪನ್ಯಾಸಕರು, ಪೊಲೀಸರ ಬಂದೋಬಸ್ತ್‌ನಿಂದ ಸ್ಥಳಕ್ಕಾಗಮಿಸದೇ ಉಳಿದಿದ್ದಾರೆ.

ಪ್ರತಿಭಟನಾ ಜಾಥಾಗೆ ಪೊಲೀಸರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲ ಅತಿಥಿ ಉಪನ್ಯಾಸಕರು, ಪೊಲೀಸರು ಹಾಗೂ ಮೈಸೂರು ಜಿಲ್ಲಾಡಳಿತದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಾವು ಆಯ್ಕೆ ಮಾಡಿರುವ ಸಿಎಂರನ್ನು ನಾವೇ ಭೇಟಿಯಾಗಲು ಬಿಡುತ್ತಿಲ್ಲ. ವೋಟ್ ಕೇಳಲು ಬರುವಾಗ ಒಬ್ಬರೇ ಬರುತ್ತಾರೆ. ಆಗ ಯಾವುದೇ ಪ್ರೊಟೋಕಾಲ್ ಇರುವುದಿಲ್ಲ. ನಮ್ಮ ಸಮಸ್ಯೆ ಹೇಳಿಕೊಳ್ಳಲು ನೂರಾರು ಜನ ಬರುತ್ತಾರೆ, ಅವರಿಗಿಲ್ಲ ಅಡೆತಡೆ ನಮಗ್ಯಾಕೆ? ಸುಮಾರು 20 ವರ್ಷಗಳಿಂದಲೂ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ.
ದಿಢೀರನೇ ಇದೀಗ ಹೊಸ ನಿಯಮ ಜಾರಿಗೆ ಬಂದರೆ ಅತಿಥಿ ಉಪನ್ಯಾಸಕರ ಜೀವನಕ್ಕೆ ಮರಣ ಶಾಸನವಾಗುತ್ತದೆ. ಇದರಿಂದ 5 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುತ್ತಾರೆ. ಈ ಪೈಕಿ ನೊಂದವರ ಕುಟುಂಬ ಜೀವ ಕಳೆದುಕೊಂಡರೆ ಯಾರು ಹೊಣೆ? ಸಿಎಂ ಬಳಿ ನಮ್ಮ ಮನವಿ ಸಲ್ಲಿಸಲು ಪೊಲೀಸರು ಅವಕಾಶ ಕೊಡಿ.
ಇಲ್ಲವಾದಲ್ಲಿ ಮುಂದಿನ ದಿನ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

10 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

20 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

33 mins ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

39 mins ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

55 mins ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

1 hour ago