ಮೈಸೂರು ನಗರ

ಮೈಸೂರು| ಸಿಎಂ ಸಿದ್ದರಾಮಯ್ಯ ಮನೆಗೆ ಅತಿಥಿ ಉಪನ್ಯಾಸಕರ ಪ್ರತಿಭಟನಾ ಜಾಥಾ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿರುವ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದ ಅತಿಥಿ ಉಪನ್ಯಾಸಕರನ್ನು ಪೊಲೀಸರು ತಡೆದರು.

ನೂರಾರು ಸಂಖ್ಯೆಯಲ್ಲಿ ಆಗಮಿಸಬೇಕಿದ್ದ ಅತಿಥಿ ಉಪನ್ಯಾಸಕರು, ಪೊಲೀಸರ ಬಂದೋಬಸ್ತ್‌ನಿಂದ ಸ್ಥಳಕ್ಕಾಗಮಿಸದೇ ಉಳಿದಿದ್ದಾರೆ.

ಪ್ರತಿಭಟನಾ ಜಾಥಾಗೆ ಪೊಲೀಸರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲ ಅತಿಥಿ ಉಪನ್ಯಾಸಕರು, ಪೊಲೀಸರು ಹಾಗೂ ಮೈಸೂರು ಜಿಲ್ಲಾಡಳಿತದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಾವು ಆಯ್ಕೆ ಮಾಡಿರುವ ಸಿಎಂರನ್ನು ನಾವೇ ಭೇಟಿಯಾಗಲು ಬಿಡುತ್ತಿಲ್ಲ. ವೋಟ್ ಕೇಳಲು ಬರುವಾಗ ಒಬ್ಬರೇ ಬರುತ್ತಾರೆ. ಆಗ ಯಾವುದೇ ಪ್ರೊಟೋಕಾಲ್ ಇರುವುದಿಲ್ಲ. ನಮ್ಮ ಸಮಸ್ಯೆ ಹೇಳಿಕೊಳ್ಳಲು ನೂರಾರು ಜನ ಬರುತ್ತಾರೆ, ಅವರಿಗಿಲ್ಲ ಅಡೆತಡೆ ನಮಗ್ಯಾಕೆ? ಸುಮಾರು 20 ವರ್ಷಗಳಿಂದಲೂ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ.
ದಿಢೀರನೇ ಇದೀಗ ಹೊಸ ನಿಯಮ ಜಾರಿಗೆ ಬಂದರೆ ಅತಿಥಿ ಉಪನ್ಯಾಸಕರ ಜೀವನಕ್ಕೆ ಮರಣ ಶಾಸನವಾಗುತ್ತದೆ. ಇದರಿಂದ 5 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುತ್ತಾರೆ. ಈ ಪೈಕಿ ನೊಂದವರ ಕುಟುಂಬ ಜೀವ ಕಳೆದುಕೊಂಡರೆ ಯಾರು ಹೊಣೆ? ಸಿಎಂ ಬಳಿ ನಮ್ಮ ಮನವಿ ಸಲ್ಲಿಸಲು ಪೊಲೀಸರು ಅವಕಾಶ ಕೊಡಿ.
ಇಲ್ಲವಾದಲ್ಲಿ ಮುಂದಿನ ದಿನ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

40 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

55 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

1 hour ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

1 hour ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

1 hour ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

2 hours ago