ಮೈಸೂರು ನಗರ

ಮೈಸೂರು| ಸಿಎಂ ಸಿದ್ದರಾಮಯ್ಯ ಮನೆಗೆ ಅತಿಥಿ ಉಪನ್ಯಾಸಕರ ಪ್ರತಿಭಟನಾ ಜಾಥಾ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿರುವ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದ ಅತಿಥಿ ಉಪನ್ಯಾಸಕರನ್ನು ಪೊಲೀಸರು ತಡೆದರು.

ನೂರಾರು ಸಂಖ್ಯೆಯಲ್ಲಿ ಆಗಮಿಸಬೇಕಿದ್ದ ಅತಿಥಿ ಉಪನ್ಯಾಸಕರು, ಪೊಲೀಸರ ಬಂದೋಬಸ್ತ್‌ನಿಂದ ಸ್ಥಳಕ್ಕಾಗಮಿಸದೇ ಉಳಿದಿದ್ದಾರೆ.

ಪ್ರತಿಭಟನಾ ಜಾಥಾಗೆ ಪೊಲೀಸರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲ ಅತಿಥಿ ಉಪನ್ಯಾಸಕರು, ಪೊಲೀಸರು ಹಾಗೂ ಮೈಸೂರು ಜಿಲ್ಲಾಡಳಿತದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಾವು ಆಯ್ಕೆ ಮಾಡಿರುವ ಸಿಎಂರನ್ನು ನಾವೇ ಭೇಟಿಯಾಗಲು ಬಿಡುತ್ತಿಲ್ಲ. ವೋಟ್ ಕೇಳಲು ಬರುವಾಗ ಒಬ್ಬರೇ ಬರುತ್ತಾರೆ. ಆಗ ಯಾವುದೇ ಪ್ರೊಟೋಕಾಲ್ ಇರುವುದಿಲ್ಲ. ನಮ್ಮ ಸಮಸ್ಯೆ ಹೇಳಿಕೊಳ್ಳಲು ನೂರಾರು ಜನ ಬರುತ್ತಾರೆ, ಅವರಿಗಿಲ್ಲ ಅಡೆತಡೆ ನಮಗ್ಯಾಕೆ? ಸುಮಾರು 20 ವರ್ಷಗಳಿಂದಲೂ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ.
ದಿಢೀರನೇ ಇದೀಗ ಹೊಸ ನಿಯಮ ಜಾರಿಗೆ ಬಂದರೆ ಅತಿಥಿ ಉಪನ್ಯಾಸಕರ ಜೀವನಕ್ಕೆ ಮರಣ ಶಾಸನವಾಗುತ್ತದೆ. ಇದರಿಂದ 5 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುತ್ತಾರೆ. ಈ ಪೈಕಿ ನೊಂದವರ ಕುಟುಂಬ ಜೀವ ಕಳೆದುಕೊಂಡರೆ ಯಾರು ಹೊಣೆ? ಸಿಎಂ ಬಳಿ ನಮ್ಮ ಮನವಿ ಸಲ್ಲಿಸಲು ಪೊಲೀಸರು ಅವಕಾಶ ಕೊಡಿ.
ಇಲ್ಲವಾದಲ್ಲಿ ಮುಂದಿನ ದಿನ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

15 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

15 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

15 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

15 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

16 hours ago