ಮೈಸೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೨೦೨೫-೨೦೨೬ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ನಿಯಮಬಾಹಿರ ಆಯ್ಕೆಯ ಕೌನ್ಸಲಿಂಗ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಬುಧವಾರದಿಂದ (ಡಿ.೩)ನಿತ್ಯ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧.೩೦ ರವರೆಗೆ ಹುಣಸೂರು ರಸ್ತೆಯ ಕಾಲೇಜು ಶಿಕ್ಷಣ ಇಲಾಖೆ ಕಚೇರಿ ಎದುರು ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ತಿಳಿಸಿದೆ.
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನೂತನ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕೌನ್ಸಿಲಿಂಗ್ ನಡೆಸುವ ವೇಳೆ ಈ ಹಿಂದೆ ಸೇವೆ ಸಲ್ಲಿಸಿದ್ದ ಅತಿಥಿ ಉಪನ್ಯಾಸಕರನ್ನು ಯುಜಿಸಿ ಅರ್ಹತೆ ಪಡೆದಿಲ್ಲವೆಂದು ಪರಿಗಣಿಸಿ ಅವರನ್ನು ಕೈ ಬಿಡಲಾಗಿದೆ ಎಂದು ರಾಜ್ಯ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಹನುಂತೇಶ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಇದನ್ನೂ ಓದಿ:-ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ರಾಜ್ಯದ ೪೪೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೧೦, ೧೫, ೨೦ ವರ್ಷಗಳಿಂದ ಸುಮಾರು ೧೦,೯೭೨ ಅತಿಥಿ ಉಪನ್ಯಾಸಕರು ಅತ್ಯಂತ ಕನಿಷ್ಠ ಗೌರವಧನ ಪಡೆದು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಪ್ರಸಕ್ತ ಸಾಲಿನಲ್ಲಿ ಯುಜಿಸಿ ಅರ್ಹತೆ ಪಡೆದಿಲ್ಲವೆಂಬ ಕಾರಣಕ್ಕಾಗಿ ೬,೯೦೪ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ತೆಗೆದು ಹಾಕಲು, ಹೊಸದಾಗಿ ನೇಮಕಾತಿ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗಿದೆ. ಇದು ಸರಿಯಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಈಗಾಗಲೇ ಸೇವೆ ಸಲ್ಲಿಸಿದವರ ವಯೋಮಿತಿ ಮೀರಿದೆ. ಇವರು ಕೆಲಸ ಕಳೆದುಕೊಂಡರೆ ಅವರ ಜೀವನ ಅತಂತ್ರವಾಗುತ್ತದೆ. ಇವರನ್ನೇ ಅವಲಂಬಿಸಿರುವ ಕುಟುಂಬ ನಿರ್ವಹಣೆ ಸಾಧ್ಯವಾಗದಂತಾಗುತ್ತದೆ. ಹೀಗಾಗಿ ಕಾಲೇಜು ಶಿಕ್ಷಣ ಇಲಾಖೆ ತಾನು ಕೈಗೊಂಡಿರುವ ನಿಯಮ ಬಾಹಿರ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಕೈಬಿಡಬೇಕು. ನಿಯಮ ಮಾರ್ಪಾಡು ಮಾಡಿ, ಈಗಾಗಲೇ ಸೇವೆ ಸಲ್ಲಿಸುತ್ತಿರುವವರನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿ, ರಾಜ್ಯದಾದ್ಯಂತ ನಡೆಯುತ್ತಿರುವಂತೆ ಪ್ರತಿಭಟನೆ ಇಲ್ಲಿಯೂ ನಡೆಯಲಿದೆ ಎಂದು ತಿಳಿಸಿದರು.
ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಮೈಸೂರು ಜಿಲ್ಲಾಧ್ಯಕ್ಷ ಡಾ.ಜಿ. ಮಹೇಶ್, ಅತಿಥಿ ಉಪನ್ಯಾಸಕರಾದ ಆಶಾ, ಶಿವೇಗೌಡ ಸುದ್ದಿಗೋಷ್ಠಿಯಲ್ಲಿ ಇದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…