ಮೈಸೂರು ನಗರ

ಮೈಸೂರು | ನಾಳೆ ಇಂದ ಅತಿಥಿ ಉಪನ್ಯಾಸಕರ ಪ್ರತಿಭಟನೆ : ನಿಯಮಬಾಹಿರ ಕೌನ್ಸಲಿಂಗ್‌ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹ

ಮೈಸೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೨೦೨೫-೨೦೨೬ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ನಿಯಮಬಾಹಿರ ಆಯ್ಕೆಯ ಕೌನ್ಸಲಿಂಗ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಬುಧವಾರದಿಂದ (ಡಿ.೩)ನಿತ್ಯ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧.೩೦ ರವರೆಗೆ ಹುಣಸೂರು ರಸ್ತೆಯ ಕಾಲೇಜು ಶಿಕ್ಷಣ ಇಲಾಖೆ ಕಚೇರಿ ಎದುರು ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ತಿಳಿಸಿದೆ.

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನೂತನ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕೌನ್ಸಿಲಿಂಗ್ ನಡೆಸುವ ವೇಳೆ ಈ ಹಿಂದೆ ಸೇವೆ ಸಲ್ಲಿಸಿದ್ದ ಅತಿಥಿ ಉಪನ್ಯಾಸಕರನ್ನು ಯುಜಿಸಿ ಅರ್ಹತೆ ಪಡೆದಿಲ್ಲವೆಂದು ಪರಿಗಣಿಸಿ ಅವರನ್ನು ಕೈ ಬಿಡಲಾಗಿದೆ ಎಂದು ರಾಜ್ಯ ಸಮನ್ವಯ ಸಮಿತಿಯ ಗೌರವಾಧ್ಯಕ್ಷ ಹನುಂತೇಶ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಇದನ್ನೂ ಓದಿ:-ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಜ್ಯದ ೪೪೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೧೦, ೧೫, ೨೦ ವರ್ಷಗಳಿಂದ ಸುಮಾರು ೧೦,೯೭೨ ಅತಿಥಿ ಉಪನ್ಯಾಸಕರು ಅತ್ಯಂತ ಕನಿಷ್ಠ ಗೌರವಧನ ಪಡೆದು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಪ್ರಸಕ್ತ ಸಾಲಿನಲ್ಲಿ ಯುಜಿಸಿ ಅರ್ಹತೆ ಪಡೆದಿಲ್ಲವೆಂಬ ಕಾರಣಕ್ಕಾಗಿ ೬,೯೦೪ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ತೆಗೆದು ಹಾಕಲು, ಹೊಸದಾಗಿ ನೇಮಕಾತಿ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗಿದೆ. ಇದು ಸರಿಯಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಈಗಾಗಲೇ ಸೇವೆ ಸಲ್ಲಿಸಿದವರ ವಯೋಮಿತಿ ಮೀರಿದೆ. ಇವರು ಕೆಲಸ ಕಳೆದುಕೊಂಡರೆ ಅವರ ಜೀವನ ಅತಂತ್ರವಾಗುತ್ತದೆ. ಇವರನ್ನೇ ಅವಲಂಬಿಸಿರುವ ಕುಟುಂಬ ನಿರ್ವಹಣೆ ಸಾಧ್ಯವಾಗದಂತಾಗುತ್ತದೆ. ಹೀಗಾಗಿ ಕಾಲೇಜು ಶಿಕ್ಷಣ ಇಲಾಖೆ ತಾನು ಕೈಗೊಂಡಿರುವ ನಿಯಮ ಬಾಹಿರ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಕೈಬಿಡಬೇಕು. ನಿಯಮ ಮಾರ್ಪಾಡು ಮಾಡಿ, ಈಗಾಗಲೇ ಸೇವೆ ಸಲ್ಲಿಸುತ್ತಿರುವವರನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿ, ರಾಜ್ಯದಾದ್ಯಂತ ನಡೆಯುತ್ತಿರುವಂತೆ ಪ್ರತಿಭಟನೆ ಇಲ್ಲಿಯೂ ನಡೆಯಲಿದೆ ಎಂದು ತಿಳಿಸಿದರು.

ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಮೈಸೂರು ಜಿಲ್ಲಾಧ್ಯಕ್ಷ ಡಾ.ಜಿ. ಮಹೇಶ್, ಅತಿಥಿ ಉಪನ್ಯಾಸಕರಾದ ಆಶಾ, ಶಿವೇಗೌಡ ಸುದ್ದಿಗೋಷ್ಠಿಯಲ್ಲಿ ಇದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

13 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

13 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

13 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

13 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

13 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

13 hours ago