ಮೈಸೂರು ನಗರ

ಮೈಸೂರು | ಹಾಫ್‌ ಮ್ಯಾರಥಾನ್‌ ; ಹೆಜ್ಜೆ ಹಾಕಿದ ಸಂಸದ ಯದುವೀರ್‌

ಮೈಸೂರು : ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ವಿವಿಧ ಸಂಘಟನೆಗಳು ವತಿಯಿಂದ ಭಾನುವಾರ ಸೆಲೆಬ್ರೇಷನ್ ಮೈಸೂರು ಹಾಫ್ ಮ್ಯಾರಥಾನ್ ಹಾಗೂ ೧೦ಕೆ ಓಟದ ಸ್ಪರ್ಧೆಯನ್ನು ಆಯೋಜಿಸಿದ್ದವು. ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮ್ಯಾರಥಾನ್‌ಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಮ್ಯಾರಥಾನ್ ದೈಹಿಕ ಶಕ್ತಿಗೆ ಮಾತ್ರವಲ್ಲ, ಮಾನಸಿಕ ವ್ಯಕ್ತಿತ್ವ ವಿಕಸಕ್ಕೂ ಪ್ರೇರಣೆಯಾಗಿದೆ ಎಂದರು. ದೇಶಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ನಮ್ಮ ಮೈಸೂರಿನ ಆಯುರ್ವೇದ ಮಹತ್ವದ ಕೊಡುಗೆಯನ್ನು ನೀಡಿದೆ. ಈಗ ಯೋಗ ವಿಶ್ವಮಟ್ಟದಲ್ಲಿಯೂ ಮನ್ನಣೆ ಪಡೆದುಕೊಂಡಿದೆ. ಇದು ಆರೋಗ್ಯ ವೃದ್ಧಿಸುವ ಮತ್ತೊಂದು ಕ್ರಮವಾಗಿದೆ ಎಂದರು.

ಇದನ್ನುಓದಿ: ಆರೋಗ್ಯಯುತ ಸಮಾಜ ನಿರ್ಮಾಣಕ್ಕಾಗಿ ಮ್ಯಾರಾಥಾನ್‌: ಜಿ.ಪರಮೇಶ್ವರ್‌

ಯುವಕರು ಈಗ ಮ್ಯಾರಥಾನ್‌ನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದನ್ನು ನೋಡಿ ಖುಷಿಯಾಯಿತು ಎಂದು ಯದುವೀರ್ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ದೇಶಾದ್ಯಂತ ನಡೆಯುವ ಫಿಟ್ ಇಂಡಿಯಾ ಆಂದೋಲನದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಆಗ ನಮ್ಮ ನಾಡು, ದೇಶ ಕೂಡ ಆರೋಗ್ಯವಂತವಾಗಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಈ ರೀತಿಯ ಆರೋಗ್ಯ ಪೂರಕ ಯೋಜನೆಗಳನ್ನು ಎಲ್ಲರೂ ಕೈಗೊಳ್ಳೋಣ, ಎಲ್ಲರೂ ಆರೋಗ್ಯ ಸಿರಿ ಪಡೆಯೋಣ ಎಂದರು.

ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡ ೧/೨ ಮ್ಯಾರಥಾನ್ ಹಾಗೂ ೧೦ಕೆ ಓಟ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಯಾವುದೇ ತೊಂದರೆ ಆಗದಂತೆ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು. ಓಟದ ವೇಳೆ ಮಾರ್ಗಗಳ ಸಂಚಾರವನ್ನು ಬದಲಿಸಲಾಗಿತ್ತು.

ಹೆಜ್ಜೆಹಾಕಿದ ಯದುವೀರ್:
ಸೆಲೆಬ್ರೇಷನ್ ಮೈಸೂರು ಹಾಫ್ ಮ್ಯಾರಥಾನ್ ಹಾಗೂ ೧೦ಕೆ ಓಟದ ಸ್ಪರ್ಧೆಗೆ ಚಾಲನೆ ನೀಡಿದ ಯದುವೀರ್ ಅವರು, ಸ್ವತಃ ಮ್ಯಾರಥಾನ್‌ನಲ್ಲಿ ಭಾಗವಹಿಸಿ ಸ್ಪಽಗಳಲ್ಲಿ ಗೆ ಉತ್ಸಾಹ ತುಂಬಿದರು. ಅಲ್ಲದೇ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಮಯೋಮಾನದವರ ಜೊತೆ ತಾವು ಕೂಡ ೧೦ ಕಿ.ಮೀ. ದೂರ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

30 mins ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

35 mins ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

37 mins ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

40 mins ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

42 mins ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

12 hours ago