ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಜೀವ ರಕ್ಷಣೆಯ ಹಿತದೃಷ್ಟಿಯಿಂದ ಇನ್ನು ಮುಂದೆ ಹೀಲಿಯಂ ಅನಿಲ ಬಳಸಿ ಬಲೂನ್ಗೆ ತುಂಬುವುದು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಮೈಸೂರು ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಸಮಾರಂಭಗಳು ಮುಂತಾದವುಗಳು ನಡೆಯುವ ಸ್ಥಳಗಳಲ್ಲಿ ಹೀಲಿಯಂ ಅನಿಲವನ್ನು ಬಳಸಿ ಬಲೂನ್ಗಳು ತುಂಬುವುದು, ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಹೀಲಿಯಂ ಅನಿಲವನ್ನು ನಿರ್ದಿಷ್ಟಗೊಂಡ ಪ್ರಮಾಣಿತ ಸುರಕ್ಷತಾ ವಿಧಾನಗಳನ್ನು ಅನುಸರಿಸದಿರುವುದು, ಇತರೆ ಸಾರ್ವಜನಿಕರು ಇದನ್ನು ಸಂಗ್ರಹಿಸುವುದು ಮತ್ತು ಬಳಕೆ ಹಾಗೂ ಸಾಗಣೆ ಮಾಡುವುದು ಹಾಗೂ ಮಾರಾಟ ಮಾಡುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಹೀಲಿಯಂ ಅನಿಲವನ್ನು ಬಳಸಿ ಬಲೂನ್ಗಳನ್ನು ತುಂಬುವ ಸಂದರ್ಭದಲ್ಲಿ ಸಂಭವಿಸುವ ದುಷ್ಪಪರಿಣಾಮಗಳಿಂದ ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಗಂಭೀರ ಅಪಾಯ ಉಂಟಾಗಿರುವುದನ್ನು ಗಂಭೀರವಾಗಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸೀಮಾ ಲಾಟ್ಕರ್ ತಿಳಿಸಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…