ಮೈಸೂರು ನಗರ

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್ ಜಖಂಗೊಂಡಿದ್ದು, ಯಾವುದೇ ಜೀವಹಾನಿಯಾಗಿಲ್ಲ.

ನಗರದ ನಗರ ಕೇಂದ್ರ ಗ್ರಂಥಾಲಯದ ಮುಂಭಾಗದ, ಸಂಭ್ರಮ ಹೋಟೆಲ್ ಮತ್ತು ಬಾರ್‌ನ ಕಾಂಪೌಂಡ್ ಒಳಗಡೆಯಿದ್ದ ಬೃಹತ್‌ಗಾತ್ರದ ಹಳೆಯ ಬೇವಿನ ಮರ ಏಕಾಏಕಿ ನೆಲಕ್ಕುರಳಿದೆ. ಮೂರ‍್ನಾಲ್ಕು ದಿನಗಳ ಹಿಂದೆ ಧಾರಕಾರ ಮಳೆ ಬಿದ್ದಿದ್ದರಿಂದ ಮರದ ಬೇರುಗಳು ಸಡಿಲಗೊಂಡಿದ್ದವು. ಇದರಿಂದ ಭಾರ ತಾಳಲಾದರೆ, ಚಿಗುರಿ ಹಸಿರಾಗಿದ್ದ ಮರ ನೆಲಕ್ಕುರಿಳಿದಿದೆ.

ಮಧ್ಯಾಹ್ನ 3.30ರ ಸಮಯದಲ್ಲಿ ಘಟನೆ ನಡೆದಿದ್ದು, ಪಕ್ಕದಲ್ಲೆ ಇದ್ದ ಕಾಂಪೌಂಡ್‌ ಉರುಳಿದೆ. ಕಾಂಪೌಂಡ್ ಪಕ್ಕದಲ್ಲಿ ಆಟೋ ನಿಲ್ಲಿಸಲಾಗಿತು. ಮರ ಬಿದ್ದ ಪರಿಣಾಮ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೈಕ್‌ನಲ್ಲಿ ಸವಾರರೊಬ್ಬರು ರಸ್ತೆಯಲ್ಲಿ ಸಾಗುವಾಗ, ಮರದ ರೆಂಬೆಕೊಂಬೆಗಳು ತಾಗಿ ಬೈಕ್ ಮೇಲೆ ಬಿದ್ದಿವೆ. ಸವಾರರಿಗೆ ತಲೆಗೆ ಸಣ್ಣ ಗಾಯವಾಗಿದ್ದು, ಕೂಡಲೇ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಹೊಸ ಸ್ವಿಫ್ಟ್ ಕಾರ್‌ನ ಮೇಲೆ ದಿಢೀರನೆ ಮರಬಿದ್ದಿದೆ. ಬಿದ್ದ ರಬಸಕ್ಕೆ ಕಾರ್ ಮೇಲ್ಬಾಗ, ಹಿಂಭಾಗ ಸಂಪೂರ್ಣ ಜಖಂ ಆಗಿದ್ದು, ಕಾರಿನ ಎಲ್ಲ ಗ್ಲಾಸ್‌ಗಳು ಪುಡಿಪುಡಿಯಾಗಿವೆ.‌

ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಮರದ ಕೆಳಭಾಗದಲ್ಲಿ ವಿದ್ಯುತ್ ಕಂಬಗಳಿದ್ದು, ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ವಿದ್ಯುತ್ ತಂತಿಗಳು ತುಂಡಾದ ಪರಿಣಾಮ ತಕ್ಷಣವೇ ವಿದ್ಯುತ್ ವ್ಯತ್ಯಯವಾಗಿದ್ದು, ಭಾರಿ ಅನಾಹುತ ತಪ್ಪಿದೆ. ವಾಹನ ಸಂಚಾರಕ್ಕೆ ಅಡ್ಡಿಯಾಗಿ, ಸವಾರರು ಟ್ರಾಫಿಕ್ ಸಮಸ್ಯೆ ಎದುರಿಸುವಂತಾಯಿತು. ವಿಷಯ ತಿಳಿದು ಕೂಡಲೇ ಸಂಚಾರ ಪೊಲೀಸರು ಪರಿಸ್ಥಿತಿಯನ್ನು ತಹಬಂದಿಗೆ ತಂದರು. ಮಹಾನಗರ ಪಾಲಿಕೆ ಸಿಬ್ಬಂದಿ ಜೆಸಿಬಿ ಹಾಗೂ ಮಷಿನ್ ಮೂಲಕ ಮರ ತುಂಡರಿಸಿ ಮರ ತೆರವುಗೊಳಿಸಿದರು. ಬಳಿಕ ವಾಹನ ಸವಾರರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು. ವಾರಂತ್ಯದಲ್ಲಿ ಅಪಾರ ಜನಸಂದಣಿಯಿದ್ದರು, ಯಾವುದೇ ಪ್ರಾಣಹಾನಿಯಾಗಿಲ್ಲ.

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

8 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

8 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

8 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

8 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

8 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

8 hours ago