ಮೈಸೂರು ನಗರ

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್ ಜಖಂಗೊಂಡಿದ್ದು, ಯಾವುದೇ ಜೀವಹಾನಿಯಾಗಿಲ್ಲ.

ನಗರದ ನಗರ ಕೇಂದ್ರ ಗ್ರಂಥಾಲಯದ ಮುಂಭಾಗದ, ಸಂಭ್ರಮ ಹೋಟೆಲ್ ಮತ್ತು ಬಾರ್‌ನ ಕಾಂಪೌಂಡ್ ಒಳಗಡೆಯಿದ್ದ ಬೃಹತ್‌ಗಾತ್ರದ ಹಳೆಯ ಬೇವಿನ ಮರ ಏಕಾಏಕಿ ನೆಲಕ್ಕುರಳಿದೆ. ಮೂರ‍್ನಾಲ್ಕು ದಿನಗಳ ಹಿಂದೆ ಧಾರಕಾರ ಮಳೆ ಬಿದ್ದಿದ್ದರಿಂದ ಮರದ ಬೇರುಗಳು ಸಡಿಲಗೊಂಡಿದ್ದವು. ಇದರಿಂದ ಭಾರ ತಾಳಲಾದರೆ, ಚಿಗುರಿ ಹಸಿರಾಗಿದ್ದ ಮರ ನೆಲಕ್ಕುರಿಳಿದಿದೆ.

ಮಧ್ಯಾಹ್ನ 3.30ರ ಸಮಯದಲ್ಲಿ ಘಟನೆ ನಡೆದಿದ್ದು, ಪಕ್ಕದಲ್ಲೆ ಇದ್ದ ಕಾಂಪೌಂಡ್‌ ಉರುಳಿದೆ. ಕಾಂಪೌಂಡ್ ಪಕ್ಕದಲ್ಲಿ ಆಟೋ ನಿಲ್ಲಿಸಲಾಗಿತು. ಮರ ಬಿದ್ದ ಪರಿಣಾಮ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೈಕ್‌ನಲ್ಲಿ ಸವಾರರೊಬ್ಬರು ರಸ್ತೆಯಲ್ಲಿ ಸಾಗುವಾಗ, ಮರದ ರೆಂಬೆಕೊಂಬೆಗಳು ತಾಗಿ ಬೈಕ್ ಮೇಲೆ ಬಿದ್ದಿವೆ. ಸವಾರರಿಗೆ ತಲೆಗೆ ಸಣ್ಣ ಗಾಯವಾಗಿದ್ದು, ಕೂಡಲೇ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಹೊಸ ಸ್ವಿಫ್ಟ್ ಕಾರ್‌ನ ಮೇಲೆ ದಿಢೀರನೆ ಮರಬಿದ್ದಿದೆ. ಬಿದ್ದ ರಬಸಕ್ಕೆ ಕಾರ್ ಮೇಲ್ಬಾಗ, ಹಿಂಭಾಗ ಸಂಪೂರ್ಣ ಜಖಂ ಆಗಿದ್ದು, ಕಾರಿನ ಎಲ್ಲ ಗ್ಲಾಸ್‌ಗಳು ಪುಡಿಪುಡಿಯಾಗಿವೆ.‌

ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಮರದ ಕೆಳಭಾಗದಲ್ಲಿ ವಿದ್ಯುತ್ ಕಂಬಗಳಿದ್ದು, ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ವಿದ್ಯುತ್ ತಂತಿಗಳು ತುಂಡಾದ ಪರಿಣಾಮ ತಕ್ಷಣವೇ ವಿದ್ಯುತ್ ವ್ಯತ್ಯಯವಾಗಿದ್ದು, ಭಾರಿ ಅನಾಹುತ ತಪ್ಪಿದೆ. ವಾಹನ ಸಂಚಾರಕ್ಕೆ ಅಡ್ಡಿಯಾಗಿ, ಸವಾರರು ಟ್ರಾಫಿಕ್ ಸಮಸ್ಯೆ ಎದುರಿಸುವಂತಾಯಿತು. ವಿಷಯ ತಿಳಿದು ಕೂಡಲೇ ಸಂಚಾರ ಪೊಲೀಸರು ಪರಿಸ್ಥಿತಿಯನ್ನು ತಹಬಂದಿಗೆ ತಂದರು. ಮಹಾನಗರ ಪಾಲಿಕೆ ಸಿಬ್ಬಂದಿ ಜೆಸಿಬಿ ಹಾಗೂ ಮಷಿನ್ ಮೂಲಕ ಮರ ತುಂಡರಿಸಿ ಮರ ತೆರವುಗೊಳಿಸಿದರು. ಬಳಿಕ ವಾಹನ ಸವಾರರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು. ವಾರಂತ್ಯದಲ್ಲಿ ಅಪಾರ ಜನಸಂದಣಿಯಿದ್ದರು, ಯಾವುದೇ ಪ್ರಾಣಹಾನಿಯಾಗಿಲ್ಲ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago