ಮೈಸೂರು ನಗರ

ಮೈಸೂರು | ಕುಡಿತಕ್ಕೆ ಹಣ ನೀಡಲಿಲ್ಲವೆಂದು ಪತ್ನಿಯನ್ನೇ ಮಚ್ಚಿನಿಂದ ಕೊಂದ ಪತಿ..

ಮೈಸೂರು : ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಹಣ ನೀಡದ ಪತ್ನಿಯನ್ನ ಮಚ್ಚಿನಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ.‌ ಪತ್ನಿ ಗಾಯಿತ್ರಿ ಅವರನ್ನು ಕೊಲೆ ಮಾಡಿದ ಪತಿ ಪಾಪಣ್ಣ ಪೊಲೀಸರ ಅತಿಥಿಯಾಗಿದ್ದಾನೆ.

ಈ ಹಿಂದೆ ರಿಯಲ್ ಎಸ್ಟೇಟ್ ವಹಿವಾಟು ನಡೆಸುತ್ತಿದ್ದ ಪಾಪಣ್ಣ ಸಾಲಗಾರನಾಗಿದ್ದ. ಜೊತೆಗೆ ಕುಡಿತದ ಚಟಕ್ಕೆ ದಾಸನಾಗಿದ್ದ. ಕೆಲಸವಿಲ್ಲದೆ ಅಲೆಯುತ್ತಿದ್ದ ಪಾಪಣ್ಣ ಹಣಕ್ಕಾಗಿ ಪತ್ನಿ ಹಾಗೂ ಮಕ್ಕಳನ್ನ ಪೀಡಿಸುತ್ತಿದ್ದ. ಪಾಪಣ್ಣನಿಗೆ ಮೂರು ಮಕ್ಕಳು, ಅದರಲ್ಲಿ ಮಗಳ ಮದುವೆಯನ್ನ ಉಳಿದ ಇಬ್ಬರು ಗಂಡು ಮಕ್ಕಳೇ ಮಾಡಿದ್ದರು. ಮದುವೆಗಾಗಿ ಮಾಡಿದ್ದ ಸಾಲವನ್ನೂ ಗಂಡು ಮಕ್ಕಳೇ ತೀರಿಸುತ್ತಿದ್ದರು. ಹೀಗಿದ್ದರೂ ದುಶ್ಚಟಗಳಿಂದ ಮಾಡಿದ್ದ ಸಾಲ ತೀರಿಸಲು ಆಗಾಗ ಹಣಕ್ಕಾಗಿ ಪತ್ನಿಯನ್ನ ಹಾಗೂ ಮಕ್ಕಳನ್ನ ಪೀಡಿಸುತ್ತಿದ್ದ ಪಾಪಣ್ಣ.

ಸಾಹುಕಾರಹುಂಡಿಯಲ್ಲಿ ಜಮೀನು ಇತ್ತು. ಜಮೀನು ಮಾರಾಟ ಮಾಡಿ ಹಣ ಕೊಡುವಂತೆ ಪಟ್ಟು ಹಿಡಿದಿದ್ದ. ಈ ವಿಚಾರದಲ್ಲಿ ದಂಪತಿ ನಡುವೆ ಆಗಾಗ ಗಲಾಟೆ ಆಗುತ್ತಿತ್ತು. ಇದೇ ವಿಚಾರದಲ್ಲಿ ಕ್ಯಾತೆ ತೆಗೆದು ಪಾಪಣ್ಣ ಮನೆಯಲ್ಲಿ ಮಕ್ಕಳು ಇಲ್ಲದಿದ್ದಾಗ ಪತ್ನಿ ಗಾಯಿತ್ರಿಯನ್ನ ಮಚ್ಚಿನಿಂದ ಹಲ್ಲೆ ನಡೆಸಿ ಕೊಂದಿದ್ದಾನೆ. ಕೃತ್ಯವೆಸಗಿದ ಪಾಪಣ್ಣ ಗಾಬರಿಯಿಂದ ಹೊರಗಿನಿಂದ ಬೀಗ ಹಾಕುತ್ತಿದ್ದ ದೃಶ್ಯವನ್ನು ಮಗ ನೋಡಿದ್ದಾನೆ. ಪ್ರಶ್ನಿಸಿದಾಗ ಪಾಪಣ್ಣ ತಬ್ಬಿಬ್ಬಾಗಿದ್ದಾರೆ. ಕೈಗಳು ರಕ್ತಮಯವಾಗಿರುವುದನ್ನ ಗಮನಿಸಿ ಬಾಗಿಲು ತೆರೆದು ನೋಡಿದಾಗ ಗಾಯಿತ್ರಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಹಣಕ್ಕಾಗಿ ಪೀಡಿಸಿದ ತಂದೆ ಪಾಪಣ್ಣ ತಾಯಿ ಗಾಯಿತ್ರಿ ಅವರನ್ನ ಕೊಲೆ ಮಾಡಿದ್ದಾನೆಂದು ಪುತ್ರ ವಿಜಯನಗರ ಪೊಲೀಸ್ ಠಾಣೆಯಲ್ಲಿ ಲಿಖಿತ ಹೇಳಿಕೆ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ವಿಜಯನಗರ ಪೊಲೀಸರು ಪಾಪಣ್ಣ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago