ಮೈಸೂರು ನಗರ

ಮೈಸೂರು | ಕುಡಿತಕ್ಕೆ ಹಣ ನೀಡಲಿಲ್ಲವೆಂದು ಪತ್ನಿಯನ್ನೇ ಮಚ್ಚಿನಿಂದ ಕೊಂದ ಪತಿ..

ಮೈಸೂರು : ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಹಣ ನೀಡದ ಪತ್ನಿಯನ್ನ ಮಚ್ಚಿನಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ.‌ ಪತ್ನಿ ಗಾಯಿತ್ರಿ ಅವರನ್ನು ಕೊಲೆ ಮಾಡಿದ ಪತಿ ಪಾಪಣ್ಣ ಪೊಲೀಸರ ಅತಿಥಿಯಾಗಿದ್ದಾನೆ.

ಈ ಹಿಂದೆ ರಿಯಲ್ ಎಸ್ಟೇಟ್ ವಹಿವಾಟು ನಡೆಸುತ್ತಿದ್ದ ಪಾಪಣ್ಣ ಸಾಲಗಾರನಾಗಿದ್ದ. ಜೊತೆಗೆ ಕುಡಿತದ ಚಟಕ್ಕೆ ದಾಸನಾಗಿದ್ದ. ಕೆಲಸವಿಲ್ಲದೆ ಅಲೆಯುತ್ತಿದ್ದ ಪಾಪಣ್ಣ ಹಣಕ್ಕಾಗಿ ಪತ್ನಿ ಹಾಗೂ ಮಕ್ಕಳನ್ನ ಪೀಡಿಸುತ್ತಿದ್ದ. ಪಾಪಣ್ಣನಿಗೆ ಮೂರು ಮಕ್ಕಳು, ಅದರಲ್ಲಿ ಮಗಳ ಮದುವೆಯನ್ನ ಉಳಿದ ಇಬ್ಬರು ಗಂಡು ಮಕ್ಕಳೇ ಮಾಡಿದ್ದರು. ಮದುವೆಗಾಗಿ ಮಾಡಿದ್ದ ಸಾಲವನ್ನೂ ಗಂಡು ಮಕ್ಕಳೇ ತೀರಿಸುತ್ತಿದ್ದರು. ಹೀಗಿದ್ದರೂ ದುಶ್ಚಟಗಳಿಂದ ಮಾಡಿದ್ದ ಸಾಲ ತೀರಿಸಲು ಆಗಾಗ ಹಣಕ್ಕಾಗಿ ಪತ್ನಿಯನ್ನ ಹಾಗೂ ಮಕ್ಕಳನ್ನ ಪೀಡಿಸುತ್ತಿದ್ದ ಪಾಪಣ್ಣ.

ಸಾಹುಕಾರಹುಂಡಿಯಲ್ಲಿ ಜಮೀನು ಇತ್ತು. ಜಮೀನು ಮಾರಾಟ ಮಾಡಿ ಹಣ ಕೊಡುವಂತೆ ಪಟ್ಟು ಹಿಡಿದಿದ್ದ. ಈ ವಿಚಾರದಲ್ಲಿ ದಂಪತಿ ನಡುವೆ ಆಗಾಗ ಗಲಾಟೆ ಆಗುತ್ತಿತ್ತು. ಇದೇ ವಿಚಾರದಲ್ಲಿ ಕ್ಯಾತೆ ತೆಗೆದು ಪಾಪಣ್ಣ ಮನೆಯಲ್ಲಿ ಮಕ್ಕಳು ಇಲ್ಲದಿದ್ದಾಗ ಪತ್ನಿ ಗಾಯಿತ್ರಿಯನ್ನ ಮಚ್ಚಿನಿಂದ ಹಲ್ಲೆ ನಡೆಸಿ ಕೊಂದಿದ್ದಾನೆ. ಕೃತ್ಯವೆಸಗಿದ ಪಾಪಣ್ಣ ಗಾಬರಿಯಿಂದ ಹೊರಗಿನಿಂದ ಬೀಗ ಹಾಕುತ್ತಿದ್ದ ದೃಶ್ಯವನ್ನು ಮಗ ನೋಡಿದ್ದಾನೆ. ಪ್ರಶ್ನಿಸಿದಾಗ ಪಾಪಣ್ಣ ತಬ್ಬಿಬ್ಬಾಗಿದ್ದಾರೆ. ಕೈಗಳು ರಕ್ತಮಯವಾಗಿರುವುದನ್ನ ಗಮನಿಸಿ ಬಾಗಿಲು ತೆರೆದು ನೋಡಿದಾಗ ಗಾಯಿತ್ರಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಹಣಕ್ಕಾಗಿ ಪೀಡಿಸಿದ ತಂದೆ ಪಾಪಣ್ಣ ತಾಯಿ ಗಾಯಿತ್ರಿ ಅವರನ್ನ ಕೊಲೆ ಮಾಡಿದ್ದಾನೆಂದು ಪುತ್ರ ವಿಜಯನಗರ ಪೊಲೀಸ್ ಠಾಣೆಯಲ್ಲಿ ಲಿಖಿತ ಹೇಳಿಕೆ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ವಿಜಯನಗರ ಪೊಲೀಸರು ಪಾಪಣ್ಣ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

4 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

4 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

4 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

4 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

4 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

4 hours ago