ಮೈಸೂರು ನಗರ

ಸಾಂಸ್ಕೃತಿಕ ರಂಗದಲ್ಲಿ ಮೈಸೂರು ಮುಂಚೂಣಿ : ಶಾಸಕ ಶ್ರೀವತ್ಸ

ಮೈಸೂರು : ಸಾಂಸ್ಕೃತಿಕ ರಂಗದಲ್ಲಿ ಮೈಸೂರು ಮಂಚೂಣಿ ಸ್ಥಾನದಲ್ಲಿದ್ದು ಹಲವು ಕಲಾವಿದರಿಗೆ ಬದುಕು ಕಟ್ಟಿಕೊಟ್ಟಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.

ನಗರದ ಖಿಲ್ಲೆ ಮೊಹಲ್ಲಾದ ಶಂಕರ ಮಠದ ರಸ್ತೆಯಲ್ಲಿರುವ ಅರಮನೆ ಜಪದಕಟ್ಟೆ ಮಠದ ಆವರಣದಲ್ಲಿ ಚಿತ್ಕಲ ಸಾಹಿತ್ಯ ಮತ್ತು ಸಾಂಸ್ಕ ತಿಕ ಪ್ರತಿಷ್ಠಾನ ಹಾಗೂ ಎಸ್‌ಜಿಎಂ ಟೂರ್ಸ್ ಸಹಯೋಗದಲ್ಲಿ ನಡೆದ ಚಿತ್ಕಲ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ,ಕವಿ ಗೋಷ್ಠಿ, ಕಾವ್ಯ ಕುಸುಮ ಕವನ ಸಂಕಲನ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಹಿತ್ಯ, ಸಿನಿಮಾ, ರಂಗಭೂಮಿ, ಸಾಹಿತ್ಯ, ಯೋಗ ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ಮೈಸೂರು ಮಂಚೂಣಿಯಲ್ಲಿದೆ. ಮೈಸೂರು ಪ್ರತಿಯೊಬ್ಬರಿಗೂ ಪ್ರೇರಣದಾಯಕ ತಾಣವಾಗಿದೆ ಎಂದರು.ರಾಷ್ಟ್ರ ಕವಿ ಕುವೆಂಪು ಅವರು ಆರಂಭದಲ್ಲಿ ಕುಕ್ಕರಹಳ್ಳಿ ಕೆರೆಯ ದಡದಲ್ಲಿ ಕುಳಿತು ಸಾಹಿತ್ಯ ಬರೆಯುತ್ತಿದ್ದರು, ಆ ಸ್ಥಳ ಅವರ ಸಾಹಿತ್ಯ ಬರವಣಿಗೆಗೆ ಪ್ರೇರಣೆಯಾಗಿತ್ತು. ಕನ್ನಡಕ್ಕೆ ಕುವೆಂಪು ಅವರ ಕೊಡುಗೆ ಅಪಾರ ಎಂದು ಹೇಳಿದರು.

ಸಾಂಸ್ಕ ತಿಕ ನಗರಿ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಮೈಸೂರಿನಲ್ಲಿ ಸಾಂಸ್ಕ ತಿಕ ಕಾರ್ಯಕ್ರಮಗಳು ಪ್ರತಿನಿತ್ಯ ನಡೆಯುತ್ತಿರುವುದು ಖುಷಿಯ ವಿಚಾರ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಕಲಾ ಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್ ಮಾತನಾಡಿ, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಎಲ್ಲ ಕ್ಷೇತ್ರಗಳಲ್ಲೂ ಹೆಚ್ಚಿನ ಅವಕಾಶ ನೀಡಬೇಕು ಎಂದರು.

ಇದನ್ನು ಓದಿ: ಆಡಳಿತ ಯಂತ್ರ ಕುಸಿದು, ಭ್ರಷ್ಟಾಚಾರ ಮಿತಿ ಮೀರಿದೆ : ರಾಜ್ಯ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ

ಕನ್ನಡವನ್ನು ಬೆಳಸುವಂತಹ,ಉಳಿಸುವಂತಹ ಕೆಲಸವಾಗಬೇಕಿಲ್ಲ, ಬಳಸಿದರೆ ಸಾಕು, ಬೇರೆ ಭಾಷೆಗಳ ಜ್ಞಾನವಿದ್ದರೂ ನಮ್ಮ ನೆಲದಲ್ಲಿ ಕನ್ನಡದಲ್ಲೇ ಮಾತನಾಡಬೇಕು ಎಂದು ಹೇಳಿದರು.

ಪ್ರಾಚೀನ ಐತಿಹ್ಯ ಹೊಂದಿರುವ ನಮ್ಮ ಕನ್ನಡ ಭಾಷೆಯನ್ನು ಎಲ್ಲರೂ ಪ್ರೀತಿಯಿಂದ ಕಲಿಯಬೇಕು, ಪ್ರೀತಿಯಿಂದ ಮಾತನಾಡಬೇಕೇ ವಿನಃ ಒತ್ತಡದಿಂದಾಗಲಿ, ಬೇರೆಯವರಿಂದ ಹೇರಿಕೆಯಿಂದಾಗಲಿ ಕಲಿಯಬಾರದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾಹಿತಿ ಎಂ.ಕೆ.ಮಹದೇವಸ್ವಾಮಿ ರಚಿಸಿರುವ ‘ಕಾವ್ಯ ಕುಸುಮ’ ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಚಿತ್ಕಲ ಸಾಹಿತ್ಯ ಮತ್ತು ಸಾಂಸ್ಕ ತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಕೆ.ಬಿ.ರೂಪದರ್ಶಿನಿ, ಸಾಹಿತಿ ಜಯಪ್ಪ ಹೊನ್ನಾಳಿ, ಸಾಹಿತಿ ಎಂ. ಕೆ.ಮಹದೇವಸ್ವಾಮಿ, ಎಸ್‌ಡಿಎಂ ಟೂರ್ಸ್ ಮತ್ತು ವಧುವರರ ಮಾಹಿತಿ ಕೇಂದ್ರದ ಮುಖ್ಯಸ್ಥರಾದ ಎಂ.ಲೋಕೇಶಯ್ಯ, ಶಿಕ್ಷಕಿ ಸುಮಾ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

3 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

3 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

5 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

5 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

5 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

5 hours ago