ಮೈಸೂರು ನಗರ

ಸಾಂಸ್ಕೃತಿಕ ರಂಗದಲ್ಲಿ ಮೈಸೂರು ಮುಂಚೂಣಿ : ಶಾಸಕ ಶ್ರೀವತ್ಸ

ಮೈಸೂರು : ಸಾಂಸ್ಕೃತಿಕ ರಂಗದಲ್ಲಿ ಮೈಸೂರು ಮಂಚೂಣಿ ಸ್ಥಾನದಲ್ಲಿದ್ದು ಹಲವು ಕಲಾವಿದರಿಗೆ ಬದುಕು ಕಟ್ಟಿಕೊಟ್ಟಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.

ನಗರದ ಖಿಲ್ಲೆ ಮೊಹಲ್ಲಾದ ಶಂಕರ ಮಠದ ರಸ್ತೆಯಲ್ಲಿರುವ ಅರಮನೆ ಜಪದಕಟ್ಟೆ ಮಠದ ಆವರಣದಲ್ಲಿ ಚಿತ್ಕಲ ಸಾಹಿತ್ಯ ಮತ್ತು ಸಾಂಸ್ಕ ತಿಕ ಪ್ರತಿಷ್ಠಾನ ಹಾಗೂ ಎಸ್‌ಜಿಎಂ ಟೂರ್ಸ್ ಸಹಯೋಗದಲ್ಲಿ ನಡೆದ ಚಿತ್ಕಲ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ,ಕವಿ ಗೋಷ್ಠಿ, ಕಾವ್ಯ ಕುಸುಮ ಕವನ ಸಂಕಲನ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಹಿತ್ಯ, ಸಿನಿಮಾ, ರಂಗಭೂಮಿ, ಸಾಹಿತ್ಯ, ಯೋಗ ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ಮೈಸೂರು ಮಂಚೂಣಿಯಲ್ಲಿದೆ. ಮೈಸೂರು ಪ್ರತಿಯೊಬ್ಬರಿಗೂ ಪ್ರೇರಣದಾಯಕ ತಾಣವಾಗಿದೆ ಎಂದರು.ರಾಷ್ಟ್ರ ಕವಿ ಕುವೆಂಪು ಅವರು ಆರಂಭದಲ್ಲಿ ಕುಕ್ಕರಹಳ್ಳಿ ಕೆರೆಯ ದಡದಲ್ಲಿ ಕುಳಿತು ಸಾಹಿತ್ಯ ಬರೆಯುತ್ತಿದ್ದರು, ಆ ಸ್ಥಳ ಅವರ ಸಾಹಿತ್ಯ ಬರವಣಿಗೆಗೆ ಪ್ರೇರಣೆಯಾಗಿತ್ತು. ಕನ್ನಡಕ್ಕೆ ಕುವೆಂಪು ಅವರ ಕೊಡುಗೆ ಅಪಾರ ಎಂದು ಹೇಳಿದರು.

ಸಾಂಸ್ಕ ತಿಕ ನಗರಿ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಮೈಸೂರಿನಲ್ಲಿ ಸಾಂಸ್ಕ ತಿಕ ಕಾರ್ಯಕ್ರಮಗಳು ಪ್ರತಿನಿತ್ಯ ನಡೆಯುತ್ತಿರುವುದು ಖುಷಿಯ ವಿಚಾರ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಕಲಾ ಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್ ಮಾತನಾಡಿ, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಎಲ್ಲ ಕ್ಷೇತ್ರಗಳಲ್ಲೂ ಹೆಚ್ಚಿನ ಅವಕಾಶ ನೀಡಬೇಕು ಎಂದರು.

ಇದನ್ನು ಓದಿ: ಆಡಳಿತ ಯಂತ್ರ ಕುಸಿದು, ಭ್ರಷ್ಟಾಚಾರ ಮಿತಿ ಮೀರಿದೆ : ರಾಜ್ಯ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ

ಕನ್ನಡವನ್ನು ಬೆಳಸುವಂತಹ,ಉಳಿಸುವಂತಹ ಕೆಲಸವಾಗಬೇಕಿಲ್ಲ, ಬಳಸಿದರೆ ಸಾಕು, ಬೇರೆ ಭಾಷೆಗಳ ಜ್ಞಾನವಿದ್ದರೂ ನಮ್ಮ ನೆಲದಲ್ಲಿ ಕನ್ನಡದಲ್ಲೇ ಮಾತನಾಡಬೇಕು ಎಂದು ಹೇಳಿದರು.

ಪ್ರಾಚೀನ ಐತಿಹ್ಯ ಹೊಂದಿರುವ ನಮ್ಮ ಕನ್ನಡ ಭಾಷೆಯನ್ನು ಎಲ್ಲರೂ ಪ್ರೀತಿಯಿಂದ ಕಲಿಯಬೇಕು, ಪ್ರೀತಿಯಿಂದ ಮಾತನಾಡಬೇಕೇ ವಿನಃ ಒತ್ತಡದಿಂದಾಗಲಿ, ಬೇರೆಯವರಿಂದ ಹೇರಿಕೆಯಿಂದಾಗಲಿ ಕಲಿಯಬಾರದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾಹಿತಿ ಎಂ.ಕೆ.ಮಹದೇವಸ್ವಾಮಿ ರಚಿಸಿರುವ ‘ಕಾವ್ಯ ಕುಸುಮ’ ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಚಿತ್ಕಲ ಸಾಹಿತ್ಯ ಮತ್ತು ಸಾಂಸ್ಕ ತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಕೆ.ಬಿ.ರೂಪದರ್ಶಿನಿ, ಸಾಹಿತಿ ಜಯಪ್ಪ ಹೊನ್ನಾಳಿ, ಸಾಹಿತಿ ಎಂ. ಕೆ.ಮಹದೇವಸ್ವಾಮಿ, ಎಸ್‌ಡಿಎಂ ಟೂರ್ಸ್ ಮತ್ತು ವಧುವರರ ಮಾಹಿತಿ ಕೇಂದ್ರದ ಮುಖ್ಯಸ್ಥರಾದ ಎಂ.ಲೋಕೇಶಯ್ಯ, ಶಿಕ್ಷಕಿ ಸುಮಾ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

1 hour ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

1 hour ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

1 hour ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

2 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

2 hours ago

ಭಾರತವನ್ನು ನರಕಕೂಪ ಎಂದು ಹೀಯಾಳಿಸಿದ ಡೊನಾಲ್ಡ್ ಟ್ರಂಪ್‌: ವಿದೇಶಾಂಗ ಇಲಾಖೆ ಕಿಡಿ

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…

3 hours ago