ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಖುದ್ದು ಭೇಟಿ ನೀಡಿ ವೀಕ್ಷಿಸಿದರು.
ಮೇಲ್ಸೇತುವೆ ಕಾಮಗಾರಿಗೆ ಬನ್ನಿಮಂಟಪ ರಸ್ತೆ, ನಂಜನಗೂಡು ರಸ್ತೆ, ಫೌಂಟನ್ ರಸ್ತೆ, ಹುಣಸೂರು ರಸ್ತೆಗಳ ವಿಭಜಕದೊಳಗೆ ಬೆಳೆಸಲಾಗಿರುವ ಮತ್ತು ಎಡ ಮತ್ತು ಬಲಬದಿಯ ಕೆಲವು ಮರ ಸೇರಿ ಒಟ್ಟು 347 ಮರಗಳು ಅಡ್ಡಿಯಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.
ಬೀಟೆ, ರೈನ್ ಟ್ರೀ, ಹೊಂಗೆ, ಆಕಾಶ ಮಲ್ಲಿಗೆ, ಗಸಗಸೆ, ಮಹಾಗನಿ, ಮಾವು, ಬೇವು ಸೇರಿದಂತೆ ವಿವಿಧ ಮರಗಳನ್ನು ಕಾಮಗಾರಿಗಾಗಿ ತೆಗೆಯಬೇಕಾಗುತ್ತದೆ. ಹೀಗಾಗಿ ಎಷ್ಟು ಮರಗಳನ್ನು ಉಳಿಸಬಹುದು, ಬೀಟೆ, ಇತ್ಯಾದಿ ಮರಗಳನ್ನು ಸ್ಥಳಾಂತರಿಸಲು ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದರು.
ಈ ಭೇಟಿಯ ವೇಳೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ ಮತ್ತಿತರರು ಹಾಜರಿದ್ದರು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಗೋಣಿಕೊಪ್ಪ : ಇಲ್ಲಿಗೆ ಸಮೀಪದ ಬಿ.ಶೆಟ್ಟಿಗೇರಿಯಲ್ಲಿ ಇಂದು(ಮೇ.6) ಬೆಳಿಗ್ಗೆ ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ನಡೆದಿದೆ. ಬಿ.ಶೆಟ್ಟಿಗೇರಿ ಗ್ರಾಮದ…