ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಖುದ್ದು ಭೇಟಿ ನೀಡಿ ವೀಕ್ಷಿಸಿದರು.
ಮೇಲ್ಸೇತುವೆ ಕಾಮಗಾರಿಗೆ ಬನ್ನಿಮಂಟಪ ರಸ್ತೆ, ನಂಜನಗೂಡು ರಸ್ತೆ, ಫೌಂಟನ್ ರಸ್ತೆ, ಹುಣಸೂರು ರಸ್ತೆಗಳ ವಿಭಜಕದೊಳಗೆ ಬೆಳೆಸಲಾಗಿರುವ ಮತ್ತು ಎಡ ಮತ್ತು ಬಲಬದಿಯ ಕೆಲವು ಮರ ಸೇರಿ ಒಟ್ಟು 347 ಮರಗಳು ಅಡ್ಡಿಯಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದರು.
ಬೀಟೆ, ರೈನ್ ಟ್ರೀ, ಹೊಂಗೆ, ಆಕಾಶ ಮಲ್ಲಿಗೆ, ಗಸಗಸೆ, ಮಹಾಗನಿ, ಮಾವು, ಬೇವು ಸೇರಿದಂತೆ ವಿವಿಧ ಮರಗಳನ್ನು ಕಾಮಗಾರಿಗಾಗಿ ತೆಗೆಯಬೇಕಾಗುತ್ತದೆ. ಹೀಗಾಗಿ ಎಷ್ಟು ಮರಗಳನ್ನು ಉಳಿಸಬಹುದು, ಬೀಟೆ, ಇತ್ಯಾದಿ ಮರಗಳನ್ನು ಸ್ಥಳಾಂತರಿಸಲು ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದರು.
ಈ ಭೇಟಿಯ ವೇಳೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ ಮತ್ತಿತರರು ಹಾಜರಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…