ಮೈಸೂರು: ಪಿಯುಸಿ ಫಲಿತಾಂಶದಲ್ಲಿ ಕಳೆದ ವರ್ಷ 17ನೇ ಸ್ಥಾನಕ್ಕೆ ಕುಸಿದಿದ್ದ ಮೈಸೂರು ಜಿಲ್ಲೆ ಈ ವರ್ಷ 12ನೇ ಸ್ಥಾನಕ್ಕೆ ಜಿಗಿದಿದೆ.
ಈ ಕುರಿತು ಮಾಹಿತಿ ನೀಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ ಮರಿಸ್ವಾಮಿ ಅವರು, ಈ ಬಾರಿ 31,510 ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆದಿದ್ದರು. ಅದರಲ್ಲಿ 23,485 ಮಂದಿ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮೈಸೂರು ಜಿಲ್ಲೆ 12ನೇ ಸ್ಥಾನಕ್ಕೆ ಜಿಗಿದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ವಾಣಿಜ್ಯ ವಿಭಾಗದಲ್ಲಿ ಪಿರಿಯಾಪಟ್ಟಣ ತಾಲ್ಲೂಕಿನ ಭಾರತ ಮಾತಾ ಪಿಯು ಕಾಲೇಜಿನ ವಿದ್ಯಾರ್ಥಿ ತೇಜಸ್ವಿನಿ ಎಂಬಾಕೆ 598 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ವಾಣಿಜ್ಯ ವಿಭಾಗದಲ್ಲಿ ಮೈಸೂರಿನ ಸದ್ವಿದ್ಯಾ ಪಿಯು ಕಾಲೇಜಿನಿ ಧಾತ್ರಿ ಜಿ ಎಂಬಾಕೆ 596 ಅಂಕ ಪಡೆದು ಎರಡನೇ ಸ್ಥಾನ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ 594 ಅಂಕಗಳೊಂದಿಗೆ ಎಸ್ವಿಸಿ ಜ್ಞಾನೋದಯ ಪಿಯು ಕಾಲೇಜಿನ ಎಸ್ ಅನಘ ಕರ್ನಿಸ್ ಹಾಗೂ ಬಿಜಿಎಸ್ ಪಿಯು ಕಾಲೇಜಿನ ಸಂಗೀತ ಎಸ್ ಎಂಬುವವರು ಸಮಪಾಲು ಪಡೆದುಕೊಂಡಿದ್ದಾರೆ. ಕಲಾವಿಭಾಗದಲ್ಲಿ ಸೆಂಟ್ ಫಿಲೋಮೀನಸ್ ಕಾಲೇಜಿನ ಬಿಬಿ ಅಮಿನಾ 584 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಆರ್ಟ್ಸ್ ವಿಭಾಗದಲ್ಲಿ ಮರಿಮಲ್ಲಪ್ಪ ಕಾಲೇಜಿನ ಎಸ್.ಪರೀಕ್ಷಾನಂದ 583 ಅಂಕಗಳನ್ನು ಪಡೆದು ಎರಡನೇ ಸ್ಥಾನ ಗಿಟ್ಟಿಸಿಕೊಂಡಿದ್ದಾನೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ ಮರಿಸ್ವಾಮಿ ಮಾಹಿತಿ ನೀಡಿದರು.
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…
ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…
ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…