ಮೈಸೂರು ನಗರ

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ ದೇವಸ್ಥಾನದ ಆಡಳಿತ ಮಂಡಳಿ ನೇತೃತ್ವದಲ್ಲಿ ಭಾನುವಾರ ತೆರೆಬಿದ್ದಿತು.

ಕರಗಕ್ಕೆ ವಿಶೇಷ ಪೂಜೆ
ಹಳದಿ ಸೀರೆ ಉಟ್ಟು, ಕಾಲುಂಗುರ, ಕಾಲಿಗೆ ಗೆಜ್ಜೆ, ಮಲ್ಲಿಗೆ ಹೂವಿನಿಂದ ಸುಂದರವಾಗಿ ಅಲಂಕೃತಗೊಂಡಿದ್ದ ಹೂವಿನ ಕರಗವನ್ನು ಹೊತ್ತು ಹೊರಬರುತ್ತಿದ್ದಂತೆ ನೆರೆದಿದ್ದ ಭಕ್ತರು ಚಪ್ಪಾಳೆಯೊಂದಿಗೆ ಬರಮಾಡಿಕೊಂಡಿತು. ಕರಗ ಸಾಗುವ ಹಾದಿಯುದ್ದಕ್ಕೂ ಭಕ್ತರು ಮಲ್ಲಿಗೆ ಹೂವಿನ ಮಳೆಗರೆಯುತ್ತಾ,ಹೂವಿನ ನೆಲಹಾಸು ನಿರ್ಮಿಸಿ ಭಕ್ತಿ ಸಮರ್ಪಿಸಿದರು.

ಪಲ್ಲಕ್ಕಿ ಮೆರವಣಿಗೆ
ಭಾನುವಾರ ಮುಂಜಾನೆಯಿಂದಲೇ ಅಭಿಷೇಕ, ಕುಂಕುಮಾರ್ಚನೆ ಹಾಗೂ ಹೂವಿನ ಅಲಂಕಾರ ಸೇರಿದಂತೆ ವಿಶೇಷ ಪೂಜೆಗಳು ನಡೆದವು. ತಮಟೆ ವಾದ್ಯದ ತಾಳಕ್ಕೆ ಕರಗ ನೃತ್ಯಗಳು ಭಕ್ತರನ್ನು ಆಕರ್ಷಿಸಿತು. ಕರಗ ಸಾಗುವ ಪ್ರಮುಖ ರಸ್ತೆಗಳಲ್ಲಿ ತಂಡೋಪತಂಡವಾಗಿ ಜಮಾಯಿಸಿದ್ದ ಜನರು, ತಮ್ಮ ಮನೆಗಳ ಮುಂದೆ ರಂಗೋಲಿ ಬಿಡಿಸಿ, ತಳಿರು ತೋರಣಗಳಿಂದ ಸ್ವಾಗತಿಸಿ ಮಹಿಳೆಯರು ಕರಗಕ್ಕೆ ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸಿ ಪೂಜೆ ಬಳಿಕ ಓಕುಳಿ ನೆರವೇರಿಸಿ ಭಕ್ತಿ ಸಾಗರದಲ್ಲಿ ಮಿಂದೆದ್ದರು.

ಕರಗ ಹೊರುವವರ ಪದ್ಧತಿ
ನಿತ್ಯವೂ ಹಾಲು, ಮಜ್ಜಿಗೆ ಹಾಗೂ ಸಾತ್ವಿಕ ಆಹಾರ ಸೇವಿಸುತ್ತಾರೆ. ಕರಗ ಹೊರುವ ದಿನ ದೇಹ ಶುದ್ದಿಯ ನಂತರ ಮೈತುಂಬಾ ಅರಿಶಿನ ಮೆತ್ತಿಕೊಂಡು, ಕಚ್ಚೆ ಧರಿಸಿ, ಕಂಕಣ ಕಟ್ಟಿಸಿಕೊಂಡು ಕಾಲಿಗೆ ಬೆಳ್ಳಿ ಗೆಜ್ಜೆ ಮತ್ತು ಕಾಲು ಮುರಿ ತೊಟ್ಟಿದ್ದು ಆಕರ್ಷಣೀಯವಾಗಿದ್ದು ಅತ್ಯಂತ ಶ್ರದ್ಧಾಭಕ್ತಿ ಯಿಂದ ಅಮ್ಮನವರ ಉತ್ಸವ ಮೂರ್ತಿಗಳನ್ನು ಹೊತ್ತು ಮೆರೆಸಿದರು.

 

ಆಂದೋಲನ ಡೆಸ್ಕ್

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

11 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

11 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

12 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

12 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

13 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

14 hours ago