ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ ದೇವಸ್ಥಾನದ ಆಡಳಿತ ಮಂಡಳಿ ನೇತೃತ್ವದಲ್ಲಿ ಭಾನುವಾರ ತೆರೆಬಿದ್ದಿತು.
ಕರಗಕ್ಕೆ ವಿಶೇಷ ಪೂಜೆ
ಹಳದಿ ಸೀರೆ ಉಟ್ಟು, ಕಾಲುಂಗುರ, ಕಾಲಿಗೆ ಗೆಜ್ಜೆ, ಮಲ್ಲಿಗೆ ಹೂವಿನಿಂದ ಸುಂದರವಾಗಿ ಅಲಂಕೃತಗೊಂಡಿದ್ದ ಹೂವಿನ ಕರಗವನ್ನು ಹೊತ್ತು ಹೊರಬರುತ್ತಿದ್ದಂತೆ ನೆರೆದಿದ್ದ ಭಕ್ತರು ಚಪ್ಪಾಳೆಯೊಂದಿಗೆ ಬರಮಾಡಿಕೊಂಡಿತು. ಕರಗ ಸಾಗುವ ಹಾದಿಯುದ್ದಕ್ಕೂ ಭಕ್ತರು ಮಲ್ಲಿಗೆ ಹೂವಿನ ಮಳೆಗರೆಯುತ್ತಾ,ಹೂವಿನ ನೆಲಹಾಸು ನಿರ್ಮಿಸಿ ಭಕ್ತಿ ಸಮರ್ಪಿಸಿದರು.
ಪಲ್ಲಕ್ಕಿ ಮೆರವಣಿಗೆ
ಭಾನುವಾರ ಮುಂಜಾನೆಯಿಂದಲೇ ಅಭಿಷೇಕ, ಕುಂಕುಮಾರ್ಚನೆ ಹಾಗೂ ಹೂವಿನ ಅಲಂಕಾರ ಸೇರಿದಂತೆ ವಿಶೇಷ ಪೂಜೆಗಳು ನಡೆದವು. ತಮಟೆ ವಾದ್ಯದ ತಾಳಕ್ಕೆ ಕರಗ ನೃತ್ಯಗಳು ಭಕ್ತರನ್ನು ಆಕರ್ಷಿಸಿತು. ಕರಗ ಸಾಗುವ ಪ್ರಮುಖ ರಸ್ತೆಗಳಲ್ಲಿ ತಂಡೋಪತಂಡವಾಗಿ ಜಮಾಯಿಸಿದ್ದ ಜನರು, ತಮ್ಮ ಮನೆಗಳ ಮುಂದೆ ರಂಗೋಲಿ ಬಿಡಿಸಿ, ತಳಿರು ತೋರಣಗಳಿಂದ ಸ್ವಾಗತಿಸಿ ಮಹಿಳೆಯರು ಕರಗಕ್ಕೆ ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸಿ ಪೂಜೆ ಬಳಿಕ ಓಕುಳಿ ನೆರವೇರಿಸಿ ಭಕ್ತಿ ಸಾಗರದಲ್ಲಿ ಮಿಂದೆದ್ದರು.
ಕರಗ ಹೊರುವವರ ಪದ್ಧತಿ
ನಿತ್ಯವೂ ಹಾಲು, ಮಜ್ಜಿಗೆ ಹಾಗೂ ಸಾತ್ವಿಕ ಆಹಾರ ಸೇವಿಸುತ್ತಾರೆ. ಕರಗ ಹೊರುವ ದಿನ ದೇಹ ಶುದ್ದಿಯ ನಂತರ ಮೈತುಂಬಾ ಅರಿಶಿನ ಮೆತ್ತಿಕೊಂಡು, ಕಚ್ಚೆ ಧರಿಸಿ, ಕಂಕಣ ಕಟ್ಟಿಸಿಕೊಂಡು ಕಾಲಿಗೆ ಬೆಳ್ಳಿ ಗೆಜ್ಜೆ ಮತ್ತು ಕಾಲು ಮುರಿ ತೊಟ್ಟಿದ್ದು ಆಕರ್ಷಣೀಯವಾಗಿದ್ದು ಅತ್ಯಂತ ಶ್ರದ್ಧಾಭಕ್ತಿ ಯಿಂದ ಅಮ್ಮನವರ ಉತ್ಸವ ಮೂರ್ತಿಗಳನ್ನು ಹೊತ್ತು ಮೆರೆಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…